ADVERTISEMENT

ಸರ್ದಾರ್‌ ಪಟೇಲ್, ಬೋಸ್‌ ಉಗ್ರವಾದಿಗಳು: ಬಯ್ಯಾಪುರ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2019, 20:29 IST
Last Updated 28 ಡಿಸೆಂಬರ್ 2019, 20:29 IST
ಅಮರೇಗೌಡ ಬಯ್ಯಾಪುರ
ಅಮರೇಗೌಡ ಬಯ್ಯಾಪುರ   

ಕುಷ್ಟಗಿ (ಕೊಪ್ಪಳ ಜಿಲ್ಲೆ): ‘ಸ್ವಾತಂತ್ರ್ಯ ಹೋರಾಟದ ವೇಳೆ ಸರ್ದಾರ್ ವಲ್ಲಭಭಾಯ್‌ ಪಟೇಲ್ ಮತ್ತು ಸುಭಾಷಚಂದ್ರ ಬೋಸ್ ಅವರು ಒಂದು ರೀತಿ ಉಗ್ರವಾದಿಗಳಂತಿದ್ದರು’ ಎಂದು ಶಾಸಕ ಅಮರೇಗೌಡ ಬಯ್ಯಾಪುರ ಹೇಳಿದರು.

ಕಾಂಗ್ರೆಸ್‌ ಪಕ್ಷದ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಮಹಾತ್ಮಗಾಂಧಿ ಅವರದ್ದು ಅಹಿಂಸಾತ್ಮಕ ಚಳವಳಿಯಾಗಿತ್ತು. ಆದರೆ, ಹಿಂಸಾ ಮಾರ್ಗದ ಮೂಲಕ ಸ್ವಾತಂತ್ರ್ಯ ಪಡೆಯಬೇಕು ಎಂಬುದು ಸರ್ದಾರ್ ಪಟೇಲ್ ಮತ್ತು ಬೋಸ್‌ ಅವರ ಉದ್ದೇಶ ಆಗಿತ್ತು. ಕೊನೆ ಘಳಿಗೆಯಲ್ಲಿ ಕಾಂಗ್ರೆಸ್‌ ಸೇರಿದ್ದ ಪಟೇಲ್ ಅವರನ್ನು ಬಿಜೆಪಿ ತಮ್ಮವರು ಎಂಬಂತೆ ಬಿಂಬಿಸಿಕೊಳ್ಳುತ್ತಿದ್ದಾರೆ. ಪಟೇಲರ ದೊಡ್ಡ ಮೂರ್ತಿಯನ್ನೇ ನಿರ್ಮಿಸಿ ವೈಭವೀಕರಿಸಿದ್ದಾರೆ. ಯುವಜನರಲ್ಲಿ ತಪ್ಪುಕಲ್ಪನೆ ಬಿತ್ತುತ್ತಿದ್ದಾರೆ’ ಎಂದರು.

ನಂತರ ಮಾತನಾಡಿದ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ದೇವೇಂದ್ರಪ್ಪ ಬಳೂಟಗಿ, ‘ನೀವು ಉಗ್ರವಾದಿಗಳು ಎಂಬ ಪದ ಬಳಸಬಾರದಿತ್ತು’ ಎಂದು ಆಕ್ಷೇಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಬಯ್ಯಾಪುರ, ‘ನಾನು ಹೇಳಿದ್ದು ಸರಿ. ಬೇಕಾದರೆ, ಇದರ ಬಗ್ಗೆ ಚರ್ಚೆಯಾಗಲಿ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.