ADVERTISEMENT

‘ಸತೀಶ ಜಾರಕಿಹೊಳಿ ಲೋಕಸಭೆಗೆ ಸ್ಪರ್ಧೆ’

ಸಚಿವ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2018, 20:24 IST
Last Updated 13 ಅಕ್ಟೋಬರ್ 2018, 20:24 IST

ಬೆಳಗಾವಿ: ‘ಸಹೋದರ, ಶಾಸಕ ಸತೀಶ ಜಾರಕಿಹೊಳಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತವಾಗಿದೆ. ಬೆಳಗಾವಿ ಅಥವಾ ಚಿಕ್ಕೋಡಿ ಕ್ಷೇತ್ರಗಳ ಪೈಕಿ ಒಂದರಲ್ಲಿ ಸ್ಪರ್ಧಿಸಲಿದ್ದಾರೆ. ಕ್ಷೇತ್ರ ಇನ್ನೂ ಅಂತಿಮಗೊಂಡಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

‘ಪಕ್ಷದ ಹಿರಿಯ ನಾಯಕರ ಜೊತೆ ಒಂದು ಸುತ್ತಿನ ಮಾತುಕತೆಯಾಗಿದೆ. ಬೆಳಗಾವಿಯಿಂದ ಸ್ಪರ್ಧಿಸಲು ಯಾವುದೇ ತೊಂದರೆಯಿಲ್ಲ. ಚಿಕ್ಕೋಡಿ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾದರೆ, ಅಲ್ಲಿನ ಸಂಸದ, ಪ್ರಕಾಶ ಹುಕ್ಕೇರಿ ಬೆಳಗಾವಿಯಿಂದ ಕಣಕ್ಕಿಳಿಯಲಿದ್ದಾರೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT