ADVERTISEMENT

‘ಸಿ.ಎಂ ಸ್ಥಾನಕ್ಕೆ ಹಲವರು ಕ್ಯೂನಲ್ಲಿದ್ದಾರೆ’

ಸಿದ್ದರಾಮಯ್ಯ, ಶಿವಕುಮಾರ್ ಆದ ಮೇಲೆ ನಮ್ಮ ಸರದಿ

​ಪ್ರಜಾವಾಣಿ ವಾರ್ತೆ
Published 7 ಜನವರಿ 2021, 18:21 IST
Last Updated 7 ಜನವರಿ 2021, 18:21 IST
ಸತೀಶ ಜಾರಕಿಹೊಳಿ
ಸತೀಶ ಜಾರಕಿಹೊಳಿ   

ಬಾಗಲಕೋಟೆ: ‘ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಮಾತ್ರವಲ್ಲ ಇನ್ನೂ ಹಲವರು ಕ್ಯೂನಲ್ಲಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಗುರುವಾರ ನಗರಕ್ಕೆ ಬಂದ ಅವರು ನವನಗರದ ಹೆಲಿ‍ಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಡುವೆ ಪೈಪೋಟಿ ಇದೆ’ ಎಂದು ಸಚಿವ ಶ್ರೀರಾಮುಲು ನೀಡಿರುವ ಹೇಳಿಕೆ ಬಗ್ಗೆ ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಜಾರಕಿಹೊಳಿ, ‘ಎಲ್ಲರಿಗೂ ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇರುತ್ತದೆ. ಕೆಲವರು ಬಹಿರಂಗವಾಗಿ ಹೇಳುತ್ತಾರೆ. ಕೆಲವರು ಹೇಳುವುದಿಲ್ಲ ಅಷ್ಟೇ. ಸಿದ್ದರಾಮಯ್ಯ, ಶಿವಕುಮಾರ್ ಆದ ಮೇಲೆ ನಾವು ಆಗುತ್ತೇವೆ’ ಎಂದರು.

ADVERTISEMENT

‘ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಳ ವಿಚಾರ ರಾಜಕೀಯ ಗಿಮಿಕ್ ಆಗಬಾರದು. ಆ ವಿಚಾರದಲ್ಲಿ ಸಮುದಾಯದ ಹಿತ ಗಮನದಲ್ಲಿಟ್ಟುಕೊಂಡು ಮುಂದುವರಿಯಬೇಕು’ ಎಂದು ಸಚಿವ ಶ್ರೀರಾಮುಲು ಅವರಿಗೆ ಜಾರಕಿಹೊಳಿ ಅವರು ಕಿವಿಮಾತು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.