ADVERTISEMENT

ಸಹೋದರ ರಮೇಶ ಪಕ್ಷ ಬಿಡಲ್ಲ: ಸತೀಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2018, 8:16 IST
Last Updated 30 ಡಿಸೆಂಬರ್ 2018, 8:16 IST
 ಅರಣ್ಯ ಸಚಿವ ಸತೀಶ ಜಾರಕಿಹೊಳಿ
ಅರಣ್ಯ ಸಚಿವ ಸತೀಶ ಜಾರಕಿಹೊಳಿ   

ಕೂಡ್ಲಿಗಿ: ಸಹೋದರ ರಮೇಶ ಜಾರಕಿಹೊಳಿ ಯಾವುದೇ ಕಾರಣಕ್ಕೂ ಪಕ್ಷ ಬಿಟ್ಟು ಹೋಗುವುದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿಯೇ ಉಳಿಯಲಿದ್ದು ಎಲ್ಲವೂ ಸುಗಮವಾಗಿ ನಡೆಯಲಿದೆ ಎಂದು ಅರಣ್ಯ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.

ಅವರು ಪಟ್ಟಣದ ಪ್ರವಾಸಿಮಂದಿರಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ಪಕ್ಷದಲ್ಲಿ ಯಾವುದೇ ಸಮಸ್ಯೆ ಇಲ್ಲ. ಸರ್ಕಾರ ಸುಗಮವಾಗಿ ನಡೆಯಲಿದೆ ಎಂದರು.

ADVERTISEMENT

ಭಾನುವಾರ ಸೇರಿದಂತೆಕಳೆದ ಒಂದು ವಾರದಲ್ಲಿ ಕೂಡ್ಲಿಗಿ ಸುತ್ತಮುತ್ತ ಇಬ್ಬರು ರೈತರ ಮೇಲೆ ಕರಡಿ ದಾಳಿ ನಡೆಸಿರುವ ಬಗ್ಗೆ ಸಚಿವರ ಗಮನಕ್ಕೆ ತಂದಾಗ, ಶೀಘ್ರದಲ್ಲಿಯೇ ಅಧಿಕಾರಿಗಳ ಸಭೆ ಕರೆದು ಮಾಹಿತಿ ಪಡೆಯಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.