ADVERTISEMENT

Leadership Row| ಮಧ್ಯಪ್ರವೇಶಿಸದಿದ್ದರೆ ಪಕ್ಷಕ್ಕೆ ತೊಂದರೆ: ಸತೀಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2026, 19:46 IST
Last Updated 22 ಫೆಬ್ರುವರಿ 2026, 19:46 IST
ಸತೀಶ ಜಾರಕಿಹೊಳಿ
ಸತೀಶ ಜಾರಕಿಹೊಳಿ   

ಬಾಗಲಕೋಟೆ: ‘ಮುಖ್ಯಮಂತ್ರಿ ಬದಲಾವಣೆ ಕುರಿತು ರಾಜ್ಯದಲ್ಲಿರುವ ಗೊಂದಲವನ್ನು ಬಗೆಹರಿಸಲು ನೀವು ಮಧ್ಯಪ್ರವೇಶಿಸಬೇಕು. ಇಲ್ಲದಿದ್ದರೆ ಪಕ್ಷಕ್ಕೆ ತೊಂದರೆಯಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಮಾಡಿದ್ದೇವೆ’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗೊಂದಲ ಮುಂದುವರೆದರೆ ಕಾರ್ಯಕರ್ತರು, ಸರ್ಕಾರಕ್ಕೆ ತೊಂದರೆ ಎಂದು ತಿಳಿಸಿದ್ದೇವೆ. ಆದಷ್ಟು ಬೇಗ ಮಾಡುತ್ತೇವೆ ಎಂದಿದ್ದಾರೆ‘ ಎಂದು ತಿಳಿಸಿದರು.

‘ರಾಜ್ಯ ಬಜೆಟ್ ಬಳಿಕ ಮಹತ್ತರ ಬದಲಾವಣೆಯಾಗುವ ಬಗ್ಗೆ ಗೊತ್ತಿಲ್ಲ. ಗೊಂದಲ ನಿಲ್ಲಲಿ ಎನ್ನುವುದಷ್ಟೇ ನಮ್ಮ ವಿಚಾರ. ಎರಡೂವರೆ ವರ್ಷ ಎಂಬುದನ್ನು ನಾವು ಕೇಳಿಲ್ಲ. ಅವರೇ ಮುಖ್ಯ ಮಂತ್ರಿಯಾಗಿ ಮುಂದುವರೆಯುತ್ತಾರೆ. ಉಳಿದದ್ದು ಹೈಕಮಾಂಡ್‌ಗೆ ಬಿಟ್ಟದ್ದು ’ಎಂದರು.

ADVERTISEMENT
‘ಮುಂದಿನ ಮುಖ್ಯಮಂತ್ರಿ ಸತೀಶಣ್ಣಾ’
ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಅಂಬಡಗಟ್ಟಿ ಕ್ರಾಸ್‌ನ ಖಾಸಗಿ ಕಾರ್ಯಕ್ರಮಕ್ಕಾಗಿ ಭಾನುವಾರ ಆಗಮಿಸಿದ್ದ ಸಚಿವ ಸತೀಶ ಜಾರಕಿಹೊಳಿ ಅವರನ್ನು ಕಂಡ ಅಭಿಮಾನಿಗಳು, ‘ಮುಂದಿನ ಸಿ.ಎಂ’ ಎಂದು ಘೋಷಣೆ ಕೂಗಿ ಹರ್ಷ ವ್ಯಕ್ತಪಡಿಸಿದರು. ಕಲ್ಯಾಣ ಮಂಟಪದ ಆವರಣದಲ್ಲಿ ‘ಮುಂದಿನ ಮುಖ್ಯಮಂತ್ರಿ ಸತೀಶಣ್ಣಾ ಜಾರಕಿಹೊಳಿ’ ಎಂಬ ನಾಮಫಲಕಗಳು ರಾರಾಜಿಸಿದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.