ADVERTISEMENT

ಚಿಕ್ಕಬಳ್ಳಾಪುರ: ಇಂದು ಉಪರಾಷ್ಟ್ರಪತಿ ಭೇಟಿ

ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ನಡೆಯುವ ‘ಜಾಗತಿಕ ಯುವ ಸಮ್ಮೇಳನ’ದ ಸಮಾರೋಪದಲ್ಲಿ ಭಾಗಿ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2018, 20:00 IST
Last Updated 22 ನವೆಂಬರ್ 2018, 20:00 IST
ವೆಂಕಯ್ಯ ನಾಯ್ಡು
ವೆಂಕಯ್ಯ ನಾಯ್ಡು   

ಚಿಕ್ಕಬಳ್ಳಾಪುರ: ತಾಲ್ಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಶುಕ್ರವಾರ ನಡೆಯುವ ‘ಜಾಗತಿಕ ಯುವ ಸಮ್ಮೇಳನ’ದ ಸಮಾರೋಪದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಭಾಗವಹಿಸಲಿದ್ದಾರೆ.

ದೆಹಲಿಯಿಂದ ಶುಕ್ರವಾರ ಬೆಳಿಗ್ಗೆ 9.40ಕ್ಕೆ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ವೆಂಕಯ್ಯ ನಾಯ್ಡು ಅವರು, ಅಲ್ಲಿಂದ ಬೆಳಿಗ್ಗೆ 10.20ಕ್ಕೆ ಸತ್ಯಸಾಯಿ ಗ್ರಾಮದ ಪ್ರೇಮಾಮೃತಂ ಭವನದಲ್ಲಿ ನಡೆಯುವ ಸಮ್ಮೇಳನದ ಸಮಾರೋಪದಲ್ಲಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಅವರು ಜಾಗತಿಕ ಮಟ್ಟದ ಸಾಧಕರಿಗೆ ‘ಶ್ರೀ ಸತ್ಯಸಾಯಿ ಮಾನವ ಅಭ್ಯುದಯ ಪ್ರಶಸ್ತಿ’ ಪ್ರದಾನ ಮಾಡಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.