ಬೆಂಗಳೂರು: ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿರೋಧಿಯಾಗಿ ವರ್ತಿಸುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ಘಟಕ ಎಐಸಿಸಿ ಸೂಚನೆಯಂತೆ ರಾಜಭವನದ ಮುಂಭಾಗದಲ್ಲಿ ಸೋಮವಾರ (ಜುಲೈ 27) ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
‘ಪ್ರಜಾಭುತ್ವ ಉಳಿಸಿ– ಸಂವಿಧಾನ ರಕ್ಷಿಸಿ’ ಎಂಬ ಘೋಷಣೆಯೊಂದಿಗೆ ಮಧ್ಯಾಹ್ನ 1.30 ಗಂಟೆಗೆ ಪ್ರತಿಭಟನೆಯಲ್ಲಿ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
‘ಪ್ರತಿಭಟನೆಯಲ್ಲಿ ಪಕ್ಷ ಎಲ್ಲ ಮುಖಂಡರು, ಸಂಸದರು, ಶಾಸಕರು, ಮಾಜಿ ಶಾಸಕರು, 2019ರ ಲೋಕಸಭೆ ಚುನಾವಣೆಯಲ್ಲಿ ಪಕ್ಷದಿಂದ ಸ್ಪರ್ಧಿಸಿದ್ದ ಅಭ್ಯರ್ಥಿಗಳು, 2018ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದವರು, ಬೆಂಗಳೂರು ನಗರದ ಡಿಸಿಸಿ ಅಧ್ಯಕ್ಷರು ಪ್ರತಿಭಟನೆಯಲ್ಲಿ ಭಾಗವಹಿಸಬೇಕು’ ಎಂದೂ ಅವರು ಪಕ್ಷದ ನಾಯಕರಿಗೆ ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.