ADVERTISEMENT

ಪರಿಶಿಷ್ಟ ಜಾತಿಯವರಿಗೆ ಶೇ 20 ಮೀಸಲಾತಿ ನೀಡಲಿ: ‌ಎಚ್‌.ಆಂಜನೇಯ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2019, 20:02 IST
Last Updated 21 ಡಿಸೆಂಬರ್ 2019, 20:02 IST
ಎಚ್.ಆಂಜನೇಯ
ಎಚ್.ಆಂಜನೇಯ   

ಬೆಂಗಳೂರು:ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ಮೀಸಲಾತಿಯನ್ನು ಶೇ 15ರಿಂದ ಶೇ 20ಕ್ಕೆ ಹೆಚ್ಚಿಸುವಂತೆ ಕೋರಿ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನ್ ದಾಸ್‌ ಆಯೋಗಕ್ಕೆ ಇದೇ 23ರಂದು ಮನವಿ ಸಲ್ಲಿಸಲಿದ್ದೇವೆ’ ಎಂದು ಕಾಂಗ್ರೆಸ್ ಮುಖಂಡ ಎಚ್‌.ಆಂಜನೇಯ ತಿಳಿಸಿದರು.

ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,‘ ಜನಸಂಖ್ಯೆಗೆ ಅನುಗುಣವಾಗಿಪರಿಶಿಷ್ಟ ಜಾತಿ ಸಮುದಾಯದ ಮೀಸಲಾತಿ ಹೆಚ್ಚಿಸಲು ರಾಜ್ಯ ಸರ್ಕಾರ ಹೈಕೋರ್ಟ್‌ನ ನಿವೃತ್ತ ಮುಖ್ಯನ್ಯಾಯಮೂರ್ತಿಎಚ್‌.ಎನ್.ನಾಗಮೋಹನ್ ದಾಸ್‌ ನೇತೃತ್ವದಲ್ಲಿ ಆಯೋಗ ರಚಿಸಿದೆ. ಮೀಸಲಾತಿ ಪ್ರಮಾಣವನ್ನು ಶೇ 17ಕ್ಕೆ ಏರಿಕೆ ಮಾಡುವ ಅಂಶಗಳು ವರದಿಯಲ್ಲಿವೆ. ಆದರೆ, ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ನೋಡಿದಾಗ, ಈ ಮೀಸಲಾತಿ ಪ್ರಮಾಣ ಸಾಕಾಗುವುದಿಲ್ಲ. ಕನಿಷ್ಠ ಶೇ 20ರಷ್ಟು ಮೀಸಲಾತಿ ಸಮುದಾಯಕ್ಕೆ ಅವಶ್ಯಕ’ ಎಂದರು.

ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್,‘ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸರ್ಕಾರ ಶೇ 17ರಷ್ಟು ಮೀಸಲಾತಿ ನೀಡಲು ಮುಂದಾಗಿದ್ದು, ಇದು ಅವೈಜ್ಞಾನಿಕ. ಸಮಿತಿಯಲ್ಲಿ ಕೆಲವು ಗೊಂದಲಗಳಿದ್ದು, ಅವುಗಳನ್ನು ಸರಿಪಡಿಸಬೇಕಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.