ADVERTISEMENT

ಎಸ್‌ಸಿ, ಎಸ್‌ಟಿ ಸಮಾವೇಶ: 20ರಂದು ಸಭೆ –ಜಿ. ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2022, 19:30 IST
Last Updated 12 ನವೆಂಬರ್ 2022, 19:30 IST
ಜಿ. ಪರಮೇಶ್ವರ
ಜಿ. ಪರಮೇಶ್ವರ   

ಬೆಂಗಳೂರು: ‘ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಸಮಾವೇಶ ನಡೆಸಲು ಪಕ್ಷದ ವರಿಷ್ಠರು ನಿರ್ಧರಿಸಿದ್ದು, ಈ ಬಗ್ಗೆ ಚರ್ಚಿಸಲು ಇದೇ 20ರಂದು ಪೂರ್ವಭಾವಿ ಸಭೆ ನಡೆಸುತ್ತೇವೆ’ ಎಂದು ಕಾಂಗ್ರೆಸ್‌ ಶಾಸಕ ಜಿ. ಪರಮೇಶ್ವರ ತಿಳಿಸಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಶನಿವಾರ ಭೇಟಿ ಮಾಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಈ ಸಮಾವೇಶ ಆಯೋಜಿಸುವ ಬಗ್ಗೆ ನಾವಿಬ್ಬರೂ ಚರ್ಚೆ ಮಾಡಿದ್ದೇವೆ. ಯಾವಾಗ ಸಮಾವೇಶ ನಡೆಸಬೇಕು, ಯಾರನ್ನು ಕರೆಯಬೇಕೆಂದು ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸುತ್ತೇವೆ’ ಎಂದರು.

‘ಪಕ್ಷದ ಮುಖಂಡ ಎಚ್‌.ಸಿ. ಮಹದೇವಪ್ಪ ಅವರ ಜೊತೆ ಈಗಾಗಲೇ ಈ ಬಗ್ಗೆ ಮಾತನಾಡಿದ್ದೇನೆ. ಸಮಾವೇಶ ಆಯೋಜಿಸುವ ವಿಚಾರದಲ್ಲಿ ಅವರಿಗೂ ಹೆಚ್ಚಿನ ಜವಾಬ್ದಾರಿ ವಹಿಸುತ್ತೇವೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.