ಬೆಂಗಳೂರು: ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯ ಕಾರ್ಯದರ್ಶಿಯಾಗಿ ಜಿ. ಶ್ರೀಧರ್ ಅವರನ್ನು ನೇಮಿಸಲಾಗಿದೆ. ಕಳೆದ ಮೂರು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿದ್ದ ದ್ವಾರಕಾನಾಥ್ ಬಾಬು ಅವರ ಅವಧಿ ಜುಲೈ 31ರಂದು ಅಂತ್ಯವಾಗಿತ್ತು.
2018ರಿಂದ ಕಾರ್ಯದರ್ಶಿ ಹುದ್ದೆ ಖಾಲಿಯಿದ್ದು, ಈ ಹುದ್ದೆಯಿಂದ ನಿವೃತ್ತರಾಗಿದ್ದ ದ್ವಾರಕಾನಾಥ್ ಬಾಬುರನ್ನೇ ಮೊದಲಿಗೆ 2 ವರ್ಷ, ಬಳಿಕ 1 ವರ್ಷ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಮುಂದುವರಿಸಲಾಗಿತ್ತು. ಈ ಹುದ್ದೆಗೆ ಅರ್ಹರು ಇದ್ದರೂ ಅವರನ್ನು ಮುಂದುವರಿಸಿದ ಬಗ್ಗೆ ಹಿರಿಯ ಅಧಿಕಾರಿಗಳ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.
ಇದೀಗ, ಇಲಾಖೆಯಲ್ಲಿ ವಿಶೇಷ ಕಾರ್ಯದರ್ಶಿಯಾಗಿರುವ ಶ್ರೀಧರ್ ಅವರನ್ನು ಖಾಲಿ ಹುದ್ದೆಗೆ ನೇಮಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.