ADVERTISEMENT

ರೋಡ್ ಶೋ ವೇಳೆ ಭದ್ರತೆ ಆತಂಕ: ಮೋದಿ ವಾಹನದತ್ತ ನುಗ್ಗಿದ ವ್ಯಕ್ತಿ ಪೊಲೀಸರ ವಶಕ್ಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಮಾರ್ಚ್ 2023, 15:39 IST
Last Updated 25 ಮಾರ್ಚ್ 2023, 15:39 IST
   

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಅವರು ದಾವಣಗೆರೆಯಲ್ಲಿ ಶನಿವಾರ ನಡೆಸಿದ ರೋಡ್ ಶೋ ವೇಳೆ ಭದ್ರತೆ ಆತಂಕ ಎದುರಾಯಿತು. ಮೋದಿ ಅವರು ತೆರಳುತ್ತಿದ್ದ ವಾಹನದತ್ತ ನುಗ್ಗಿದ ವ್ಯಕ್ತಿಯೊಬ್ಬನನ್ನು ಬೆಂಗಾವಲು ಸಿಬ್ಬಂದಿ ತಡೆದಿದ್ದಾರೆ. ಬಳಿಕ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭ ಮಹಾಸಂಗಮದಲ್ಲಿ ಭಾಗವಹಿಸಲು ಮೋದಿ ಅವರು ಇಂದು ರಾಜ್ಯಕ್ಕೆ ಆಗಮಿಸಿದ್ದರು.

ಮೋದಿ ಅವರು ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮೆಟ್ರೊ ರೈಲು ಮಾರ್ಗ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.