ADVERTISEMENT

ಪಂಡಿತಾರಾಧ್ಯ ಶ್ರೀ ಆಸ್ಟ್ರೇಲಿಯಾ ಪ್ರವಾಸ

​ಪ್ರಜಾವಾಣಿ ವಾರ್ತೆ
Published 2 ಮೇ 2019, 19:38 IST
Last Updated 2 ಮೇ 2019, 19:38 IST
ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ
ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ   

ಚಿತ್ರದುರ್ಗ: ಸಾಣೇಹಳ್ಳಿ ತರಳಬಾಳು ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮೇ 6ರಿಂದ 16ರವರೆಗೆ ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳುತ್ತಿದ್ದಾರೆ.

ಆಸ್ಟ್ರೇಲಿಯಾ ಬಸವಸಮಿತಿ ರಚನೆಯಾಗಿ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಿಡ್ನಿಯಲ್ಲಿ ಏರ್ಪಡಿಸಿರುವ ‘ಅಂತರರಾಷ್ಟ್ರೀಯ ವಚನ ಸಾಹಿತ್ಯ ಸಮ್ಮೇಳನ’ದಲ್ಲಿ ಸ್ವಾಮೀಜಿ ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಶಿವಕುಮಾರ ಕಲಾಸಂಘದ ಕಲಾವಿದರು ‘ಉರಿಲಿಂಗ ಪೆದ್ದಿ’ ನಾಟಕ ‍ಪ್ರದರ್ಶಿಸಲಿದ್ದಾರೆ ಎಂದು ಮಠದ ‍ಪ್ರಕಟಣೆ ತಿಳಿಸಿದೆ. ತರಳಬಾಳು ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ 25 ವರ್ಷಗಳ ಹಿಂದೆ ಆಸ್ಟ್ರೇಲಿಯಾದ ಬೇವಿನಕೊಪ್ಪದ ಎಂಬುವರ ಮನೆಯಲ್ಲಿ ‘ಬಸವ ಸಮಿತಿ’ಯನ್ನು ಹುಟ್ಟುಹಾಕಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.