ADVERTISEMENT

ಇಬ್ಬರು ಸಚಿವರನ್ನು ಮಹಾರಾಷ್ಟ್ರದ ಜತ್ತ, ಅಕ್ಕಲಕೋಟೆಗೆ ಕಳುಹಿಸಿ: ಸಿಎಂಗೆ ಪತ್ರ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2022, 17:36 IST
Last Updated 29 ನವೆಂಬರ್ 2022, 17:36 IST
   

ಬೆಳಗಾವಿ: ‘ಮಹಾರಾಷ್ಟ್ರದ ಇಬ್ಬರು ಗಡಿ ಉಸ್ತುವಾರಿ ಸಚಿವರು ಡಿ.3ರಂದು ಬೆಳಗಾವಿಗೆ ಭೇಟಿ ನೀಡುತ್ತಿದ್ದಾರೆ. ಹಾಗಾಗಿ, ಕರ್ನಾಟಕದ ಇಬ್ಬರು ಹಿರಿಯ ಸಚಿವರನ್ನು ಮಹಾರಾಷ್ಟ್ರದ ಜತ್ತ, ಅಕ್ಕಲಕೋಟೆ ಹಾಗೂ ದಕ್ಷಿಣ ಸೊಲ್ಲಾಪುರಕ್ಕೆ ಕಳುಹಿಸಿ ಅಲ್ಲಿನ ಕನ್ನಡಿಗರಿಗೆ ಧೈರ್ಯ ತುಂಬಬೇಕು’ ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಂಗಳವಾರ ಪತ್ರ ಬರೆದಿದ್ದಾರೆ.

‘ಹೊರನಾಡ ಕನ್ನಡಿಗರು ಅಲ್ಲಿನ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದು, ಕರ್ನಾಟಕಕ್ಕೆ ಸೇರಲು ಒಲವು ತೋರುತ್ತಿದ್ದಾರೆ. ಕರ್ನಾಟಕ ಸರ್ಕಾರ ಅವರಿಗೆ ಎಲ್ಲ ರೀತಿಯ ಬೆಂಬಲ ನೀಡಬೇಕು’ ಎಂದೂ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT