ADVERTISEMENT

ಅಧಿವೇಶನ ಅನಿರ್ದಿಷ್ಟ ಕಾಲ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2020, 19:45 IST
Last Updated 24 ಮಾರ್ಚ್ 2020, 19:45 IST

ಬೆಂಗಳೂರು: ವಿಧಾನಮಂಡಲದ ಅಧಿವೇಶನವನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಲಾಯಿತು.

ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕು ವ್ಯಾಪಕವಾಗಿ ಹಬ್ಬುತ್ತಿದ್ದು, ಕೋವಿಡ್‌- 19 ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಧಿವೇಶನ ಮೊಟಕುಗೊಳಿಸಲು ಸೋಮವಾರ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು.

ಆ ಪ್ರಕಾರ, ಮಂಗಳವಾರ ಬೆಳಿಗ್ಗೆ ಬಜೆಟ್‌ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಉತ್ತರ ನೀಡಿದರು. ಕೆಲವು ಪ್ರಮುಖ ಮಸೂದೆಗಳಿಗೂ ಅಂಗೀಕಾರ ನೀಡಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.