ADVERTISEMENT

ಸಾರ್ವಜನಿಕ ಆಸ್ತಿ ಸಂರಕ್ಷಣೆಯಲ್ಲಿ ಹಿನ್ನಡೆ: ಸಿಎಂ ಬೊಮ್ಮಾಯಿ ಬೇಸರ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2023, 22:01 IST
Last Updated 23 ಫೆಬ್ರುವರಿ 2023, 22:01 IST
   

ಬೆಂಗಳೂರು: ‘ಬಿಡಿಎ, ಬಿಬಿಎಂಪಿ ಸೇರಿದಂತೆ ಸಾರ್ವಜನಿಕ ಆಸ್ತಿ ಸಂರಕ್ಷಣೆಗೆ ಕೋರ್ಟ್‌ನಲ್ಲಿ ಸಮರ್ಥವಾಗಿ ವಾದ ಮಂಡಿಸುವಲ್ಲಿ ವಿಫಲತೆ ಕಾಣುತ್ತಿದ್ದೇವೆ. ಆಸ್ತಿಗಳ ಸಂರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌ನ ಮರಿತಿಬ್ಬೇಗೌಡ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ದೇವರ ಚಿಕ್ಕನಹಳ್ಳಿ ಬಳಿ ನಿರ್ಮಿಸಿದ ಬಿಡಿಎ ಬಡಾವಣೆ ನಿವೇಶನಗಳ ಹಂಚಿಕೆ ರದ್ದು ಮಾಡಲು ಅವಕಾಶ ಕೊಡುವುದಿಲ್ಲ. ಭೂಸ್ವಾಧೀನ, ಬಡಾವಣೆ ನಿರ್ಮಾಣದ ವಿಷಯದಲ್ಲಿ ಹಲವು ನ್ಯೂನತೆಗಳು ಪತ್ತೆಯಾಗಿವೆ. ಅಧಿಕಾರಿಗಳು ಕೋರ್ಟ್‌ಗೆ ಸೂಕ್ತ ದಾಖಲೆಗಳನ್ನು ಸಲ್ಲಿಸಬೇಕು. ಖಾಸಗಿಯವರ ಜತೆ ಶಾಮೀಲಾದರೆ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT