ADVERTISEMENT

ರಾಮನಗರ | ಸಕಾಲಕ್ಕೆ ಚಿಕಿತ್ಸೆ ಸಿಗದೆ ಏಳು ತಿಂಗಳ ಹೆಣ್ಣು ಮಗು ಸಾವು

​ಪ್ರಜಾವಾಣಿ ವಾರ್ತೆ
Published 20 ಜುಲೈ 2020, 11:04 IST
Last Updated 20 ಜುಲೈ 2020, 11:04 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಾಮನಗರ: ಜಿಲ್ಲೆಯ ಚನ್ನಪಟ್ಟಣದಲ್ಲಿ ಸಕಾಲಕ್ಕೆ ಚಿಕಿತ್ಸೆ ಸಿಗದೇ ಏಳು ತಿಂಗಳ ಹೆಣ್ಣು ಮಗು ಸಾವನ್ನಪ್ಪಿದೆ.

ನಗರದ ಪೇಟೆ ಬೀದಿ ನಿವಾಸಿ ಪ್ರದೀಪ್ ಅವರ ಪುತ್ರಿಗೆ ಬೆಳಗ್ಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತು. ಮೊದಲಿಗೆ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ಮಕ್ಕಳ ತಜ್ಞರು ಲಭ್ಯವಿಲ್ಲದ ಕಾರಣ ಮಕ್ಕಳ ತಜ್ಞ ರಾಜಣ್ಣ ಬಳಿ, ಹಾಗೂ ನಂತರದಲ್ಲಿ ಬಿ.ಜಿ. ಲಿಂಗೇಗೌಡ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗೆ ಅಲೆದಿದ್ದಾರೆ.

ಆದರೆ, ಎಲ್ಲಿಯೂ ಚಿಕಿತ್ಸೆ ದೊರಕಿಲ್ಲ. ಮಗು ಮೃತಪಟ್ಟಿರುವುದಾಗಿ ಲಿಂಗೇಗೌಡ ಆಸ್ಪತ್ರೆ ವೈದ್ಯರು ಹೇಳಿದ್ದಾರೆ. ಕಡೆಯ ಪ್ರಯತ್ನ ಎಂಬಂತೆ ಪೋಷಕರು ಮತ್ತೆ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದ ವೇಳೆ ಮಗು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.