ADVERTISEMENT

ರಾಜ್ಯದಲ್ಲಿ ಏಳು ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2021, 6:48 IST
Last Updated 2 ಫೆಬ್ರುವರಿ 2021, 6:48 IST
ಎಸಿಬಿ ದಾಳಿ ವೇಳೆ ಅಪಾರ ಪ್ರಮಾಣದ ಹಣ, ಒಡವೆ ಪತ್ತೆ
ಎಸಿಬಿ ದಾಳಿ ವೇಳೆ ಅಪಾರ ಪ್ರಮಾಣದ ಹಣ, ಒಡವೆ ಪತ್ತೆ    

ಬೆಂಗಳೂರು: ರಾಜ್ಯದಲ್ಲಿ ಏಳು ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ(ಎಸಿಬಿ) ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಬೆಂಗಳೂರು, ಬಳ್ಳಾರಿ, ಕೋಲಾರ, ಧಾರವಾಡ, ಕೊಪ್ಪಳ, ದಕ್ಷಿಣ ಕನ್ನಡ, ಚಿತ್ರದುರ್ಗ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಏಕ ಕಾಲಕ್ಕೆ ದಾಳಿ ಆರಂಭಿಸಲಾಗಿದೆ.

ಧಾರವಾಡದ ಸಣ್ಣ ನೀರಾವರಿ ಇಲಾಖೆಯ ಎಕ್ಸಿಕ್ಯುಟಿವ್ ಎಂಜಿನಿಯರ್ ದೇವರಾಜ್ ಕಲ್ಲೇಶ್, ಬೆಂಗಳೂರಿನ ಸಹಕಾರ ಇಲಾಖೆ ಜಂಟಿ ರಿಜಿಸ್ಟ್ರಾರ್ ಪಾಂಡರಂಗ ಗರಗ, ಮಂಗಳೂರು ಮಹಾನಗರ ಪಾಲಿಕೆಯ ನಗರ ಯೋಜನೆಗಳ ವಿಭಾಗದ ಜಂಟಿ ನಿರ್ದೇಶಕ ಕೆ.ವಿ. ಜಯರಾಜ್, ಕೋಲಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ. ಎಸ್.ಎನ್. ವಿಜಯಕುಮಾರ್, ಕೊಪ್ಪಳದ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀನಿವಾಸ್, ಲೋಕೋಪಯೋಗಿ ಇಲಾಖೆಯ ಮಾಗಡಿ ಉಪವಿಭಾಗದ ಕಿರಿಯ ಎಂಜಿನಿಯರ್ ಚನ್ನಬಸಪ್ಪ, ಧಾರವಾಡದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ(ಎಸಿಎಫ್‌) ಶ್ರೀನಿವಾಸ್ ಅವರ ಮನೆ ಮಲೆ ದಾಳಿ ನಡೆಸಲಾಗಿದೆ.

ಈ ಅಧಿಕಾರಗಳು ಆದಾಯ ಮೀರಿ ಆಸ್ತಿ ಗಳಿಸಿರುವ ಮಾಹಿತಿ ಆಧರಿಸಿ ಶೋಧ ನಡೆಸಲಾಗುತ್ತಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.