ADVERTISEMENT

ಮಂತ್ರಿಗಳಿಗೆ ಬೇರೆ, ಸಾಮಾನ್ಯರಿಗೆ ಬೇರೆ ಕಾನೂನು ಇದೆಯೇ: ಕಾಂಗ್ರೆಸ್ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2021, 9:36 IST
Last Updated 31 ಮಾರ್ಚ್ 2021, 9:36 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿಗೆ ಸಂಬಂಧಿಸಿದ್ದೆನ್ನಲಾದ ಸಿ.ಡಿ ಪ್ರಕರಣ ದಿನಕ್ಕೊಂದು ಆಯಾಮ ಪಡೆದುಕೊಳ್ಳುತ್ತಿದೆ. ಇದರ ನಡುವೆ ಕಾಂಗ್ರೆಸ್‌–ಬಿಜೆಪಿ ಟ್ವೀಟ್‌ ಸಮರ ಬುಧವಾರವೂ ಮುಂದುವರಿದಿದೆ.

ಪ್ರಕರಣ ಸಂಬಂಧ ಸರಣಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ‘ಬಸವರಾಜ ಬೊಮ್ಮಾಯಿ ಅವರೇ, ಮಂತ್ರಿಗಳಿಗೆ ಬೇರೆ, ಸಾಮಾನ್ಯರಿಗೆ ಬೇರೆ ಕಾನೂನು ಇದೆಯೇ? ಎಂದು ರಾಜ್ಯದ ಜನ ಕೇಳುತ್ತಿದ್ದಾರೆ. ಜನತೆಯಲ್ಲಿದ್ದ ಕಾನೂನಿನ ಬಗೆಗಿನ ಭರವಸೆಯನ್ನು ಕುಗ್ಗಿಸುತ್ತಿರುವುದೂ ಅಲ್ಲದೆ ಅತ್ಯಾಚಾರ ಆರೋಪಿಯ ಬಗ್ಗೆ ಬಂಡತನದಲ್ಲಿ ಸಮರ್ಥನೆಗೆ ಇಳಿಯುವುದಕ್ಕೆ ಸ್ವಲ್ಪವೂ ನಾಚಿಕೆ ಎನಿಸುತ್ತಿಲ್ಲವೇ?’ ಎಂದು ಪ್ರಶ್ನಿಸಿದೆ.

‘ಯಡಿಯೂರಪ್ಪ ಅವರೇ, ಹಾಗಿದ್ದರೆ ಕಣ್ಣಿನಲ್ಲಿ ನೋಡಲಾಗದಂತಹ ಸಿಡಿ ಇದೆ ಎಂದು ನಿಮ್ಮ ಬಗೆಗಿನ ಶಾಸಕ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಆರೋಪ ನಿಜವೇ?, ಅಥವಾ ಸುಳ್ಳೇ? ನಿಜವಾಗಿದ್ದರೆ ನೀವೇಕೆ ಇನ್ನೂ ರಾಜೀನಾಮೆ ನೀಡಲಿಲ್ಲ? ಸುಳ್ಳಾಗಿದ್ದರೆ ನೀವೇಕೆ ಇನ್ನೂ ಯತ್ನಾಳ್‌ರನ್ನು ಪಕ್ಷದಿಂದ ಉಚ್ಛಾಟಿಸಲಿಲ್ಲ?’ ಎಂದು ಕಾಂಗ್ರೆಸ್‌ ಮತ್ತೊಂದು ಟ್ವೀಟ್ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.