ADVERTISEMENT

‘ಬಸವ ಭೂಷಣ’ ಪ್ರಶಸ್ತಿ ವಾಪಸ್‌ಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2022, 19:32 IST
Last Updated 10 ನವೆಂಬರ್ 2022, 19:32 IST
ಶಿವಮೂರ್ತಿ ಮುರುಘಾ ಶರಣರು
ಶಿವಮೂರ್ತಿ ಮುರುಘಾ ಶರಣರು   

ಬೆಂಗಳೂರು: ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಶರಣರು ನೀಡಿದ್ದ ‘ಬಸವ ಭೂಷಣ’ ಪ್ರಶಸ್ತಿಯನ್ನು ವಾಪಸ್‌ ನೀಡಬೇಕು ಎಂದು ನೈಜ ಹೋರಾಟಗಾರರ ವೇದಿಕೆಯ ಎಚ್‌.ಎಂ. ವೆಂಕಟೇಶ್‌ ಅವರು ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಅವರು, ‘ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಎದುರಿಸುತ್ತಿರುವ ಶಿವಮೂರ್ತಿ ಶರಣರು ಸಂಸ್ಕೃತಿ ಉತ್ಸವದಲ್ಲಿ ನೀಡಿದ್ದ ಪ್ರಶಸ್ತಿಯನ್ನು ವಾಪಸ್‌ ನೀಡಿ ನಾಡಿನ ಘನತೆ ಮತ್ತು ಗೌರವ ಕಾಪಾಡಬೇಕು’ ಎಂದು ಆಗ್ರಹಿಸಿದ್ದಾರೆ.

ಜತೆಗೆ, ಅತ್ಯಾಚಾರದ ಕೃತ್ಯವೆಸಗಿರುವ ಆರೋಪಿಯ ಕೈಯಿಂದ ಪ್ರಶಸ್ತಿ ಪಡೆದವರು ಸಹ ವಾಪಸ್‌ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.