ಬೆಂಗಳೂರು:ಶ್ವಾಸಕೋಶದಲ್ಲಿ ನೀರು ತುಂಬಿಕೊಂಡಿದ್ದರಿಂದ ಸಂಶೋಧಕ ಷ.ಶೆಟ್ಟರ್ ಅವರುನಗರದ ಖಾಸಗಿಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ.
ಬನ್ನೇರುಘಟ್ಟದ ಅಪೊಲೋ ಆಸ್ಪತ್ರೆಯ ವೈದ್ಯರು ಆರು ದಿನಗಳಿಂದ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ವಯೋಸಹಜ ಕಾಯಿಲೆಗಳ ಜತೆಗೆ ಉಸಿರಾಟದ ಸಮಸ್ಯೆಯೂ ಕಾಣಿಸಿಕೊಂಡಿತ್ತು. ಈಗ ಶ್ವಾಸಕೋಶದಲ್ಲಿನ ನೀರನ್ನು ಹೊರತೆಗೆಯಲಾಗುತ್ತಿದೆ.
‘ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು,ನಮ್ಮನ್ನು ಗುರುತಿಸುತ್ತಿದ್ದಾರೆ. ಮಾತನಾಡಲು ಸಾಧ್ಯವಾಗುತ್ತಿಲ್ಲ. ಅವರ ಹೃದಯವೂ ದುರ್ಬಲವಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ’ ಎಂದು ಕುಟುಂಬದ ಸದಸ್ಯರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.