ADVERTISEMENT

ಶರತ್‌ ಬಚ್ಚೇಗೌಡ ಕಾಂಗ್ರೆಸ್‌ ಸೇರ್ಪಡೆ ಹಾದಿ ಸುಗಮ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2020, 19:29 IST
Last Updated 4 ನವೆಂಬರ್ 2020, 19:29 IST
ಶರತ್‌ ಬಚ್ಚೇಗೌಡ
ಶರತ್‌ ಬಚ್ಚೇಗೌಡ    

ಹೊಸಕೋಟೆ:ಹೊಸಕೋಟೆಯ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್‌ ಸೇರ್ಪಡೆಯಾಗಲು ತಾಲ್ಲೂಕು ಕಾಂಗ್ರೆಸ್‌ ಘಟಕ ಬುಧವಾರ ಒಮ್ಮತದಿಂದ ಒಪ್ಪಿಗೆ ಸೂಚಿಸಿದೆ. ಇದರೊಂದಿಗೆ ಶರತ್‌ ಕಾಂಗ್ರೆಸ್‌ ಸೇರ್ಪಡೆಯ ಹಾದಿ ಸುಗಮವಾದಂತಾಗಿದೆ.

‘ಹೊಸಕೋಟೆಯಲ್ಲಿ ಬುಧವಾರ ನಡೆದ ತಾಲ್ಲೂಕು ಕಾಂಗ್ರೆಸ್ ಸಭೆಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಶೀಘ್ರ ಕೆಪಿಸಿಸಿಗೆ ವರದಿ ಸಲ್ಲಿಸಲಾಗುವುದು’ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಮುನಿಶಾಮಣ್ಣ ತಿಳಿಸಿದ್ದಾರೆ.

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ್ದ ಶರತ್‌ ಬಚ್ಚೇಗೌಡ ಅವರು ತಮ್ಮ ರಾಜಕೀಯ ಎದುರಾಳಿ ಹಾಗೂ ಬಿಜೆಪಿ ಅಭ್ಯರ್ಥಿ ಎಂ.ಟಿ.ಬಿ ನಾಗರಾಜ್‌ ವಿರುದ್ಧ ಜಯ
ಗಳಿಸಿದ್ದರು.

ADVERTISEMENT

ಚಿಕ್ಕಬಳ್ಳಾಪುರದ ಬಿಜೆಪಿ ಸಂಸದರಾಗಿರುವ ಶರತ್‌ ತಂದೆ ಬಿ.ಎನ್‌. ಬಚ್ಚೇಗೌಡ ಕೂಡ ಮಗನ ಕಾಂಗ್ರೆಸ್‌ ಸೇರ್ಪಡೆಗೆ ಹಸಿರು ನಿಶಾನೆ ನೀಡಿದ್ದಾರೆ ಎಂದು ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.