ಶಿವಮೊಗ್ಗ: ಅರಸೀಕೆರೆ–ತುಮಕೂರು ನಡುವೆ ಬಾಣಸಂದ್ರ ರೈಲ್ವೆ ನಿಲ್ದಾಣ ಯಾರ್ಡ್ನಲ್ಲಿ ವಿವಿಧ ಕಾಮಗಾರಿಗಳನ್ನು ನಡೆಸಲಾಗುತ್ತಿದ್ದು, ಈ ಕಾರಣ ಕೆಲವು ರೈಲುಗಳನ್ನು ಡಿ. 10ರಿಂದ 13ರವರೆಗೆ ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಮಾರ್ಗದಲ್ಲಿ ಸಾಗುವ ಶಿವಮೊಗ್ಗ–ಬೆಂಗಳೂರು ಪ್ಯಾಸೆಂಜರ್ (56917/56918) ರೈಲನ್ನು ರದ್ದುಗೊಳಿಸಲಾಗಿದೆ. ಈ ರೈಲು ಪ್ರತಿದಿನ ಶಿವಮೊಗ್ಗದಿಂದ ಮಧ್ಯಾಹ್ನ 12.30ಕ್ಕೆ ಹೊರಡುತ್ತಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.