ADVERTISEMENT

ಶಿರಾಡಿ ಘಾಟ್‌ ರಸ್ತೆಯಲ್ಲಿ ಬಸ್ ಸಂಚಾರ ಆರಂಭ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2018, 17:08 IST
Last Updated 3 ಅಕ್ಟೋಬರ್ 2018, 17:08 IST
ಶಿರಾಡಿ ಘಾಟಿ ರಸ್ತೆಯಲ್ಲಿ ಬಸ್ ಓಡಾಟ ಆರಂಭಿಸಿರುವುದು.(ಉಪ್ಪಿನಂಗಡಿ ಚಿತ್ರ)
ಶಿರಾಡಿ ಘಾಟಿ ರಸ್ತೆಯಲ್ಲಿ ಬಸ್ ಓಡಾಟ ಆರಂಭಿಸಿರುವುದು.(ಉಪ್ಪಿನಂಗಡಿ ಚಿತ್ರ)   

ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ಸಂಪರ್ಕದ ಶಿರಾಡಿ ಘಾಟ್‌ ರಸ್ತೆಯಲ್ಲಿ ಬಸ್ ಸಂಚಾರ ಬುಧವಾರ ಆರಂಭಗೊಂಡಿದೆ.

ಬುಧವಾರ ಬೆಳಿಗ್ಗೆ 6 ಗಂಟೆಯಿಂದಲೇ ಬಸ್ ಸಂಚಾರ ಆರಂಭ ಆಗಿದ್ದು, ಬೆಂಗಳೂರು-ಮಂಗಳೂರು, ಧರ್ಮಸ್ಥಳ-ಬೆಂಗಳೂರು, ಸುಬ್ರಹ್ಮಣ್ಯ- ಬೆಂಗಳೂರು ಮಧ್ಯೆ ಬಸ್‌ಗಳು ಸಂಚಾರ ಆರಂಭಿಸಿವೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಬಸ್ ಸಂಚಾರಕ್ಕೆ ಅವಕಾಶ ನೀಡಿ ಆದೇಶ ಹೊರಡಿಸಿದ್ದರು.

ADVERTISEMENT

9 ತಿಂಗಳಿನಿಂದ ಈ ರಸ್ತೆಯಲ್ಲಿ, ಕಾಂಕ್ರಿಟೀಕರಣ ಕಾಮಗಾರಿ ಹಾಗೂ ಮಳೆ, ಗುಡ್ಡ ಕುಸಿತ ಮೊದಲಾದ ಕಾರಣಗಳಿಂದಾಗಿ ಸಂಚಾರ ನಿಷೇಧ ಹೇರಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.