ADVERTISEMENT

ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಎಡಿಜಿಪಿ, ಡಿಸಿ ಮಾಲಾರ್ಪಣೆ

ಕನ್ನಡಪರ ಹೋರಾಟಗಾರರು, ಶಿವಾಜಿ ಅಭಿಮಾನಿಗಳ ಸಭೆ ಯಶಸ್ವಿ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2020, 16:22 IST
Last Updated 28 ಆಗಸ್ಟ್ 2020, 16:22 IST
   

ಬೆಳಗಾವಿ: ಪೀರನವಾಡಿಯಲ್ಲಿ ಶುಕ್ರವಾರ ನಸುಕಿನಲ್ಲಿ ಕನ್ನಡಪರ ಹೋರಾಟಗಾರರು ಪ್ರತಿಷ್ಠಾಪಿಸಿದ್ದ ಸಂಗೊಳ್ಳಿರಾಯಣ್ಣ ಪ್ರತಿಮೆಗೆ ಎಡಿಜಿಪಿ ಅಮರ್‌ಕುಮಾರ್‌ ಪಾಂಡೆ ಹಾಗೂ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ರಾತ್ರಿ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

ಕನ್ನಡಪರ ಹೋರಾಟಗಾರರು, ಶಿವಾಜಿ ಅಭಿಮಾನಿಗಳು ಹಾಗೂ ಸ್ಥಳೀಯ ಮುಖಂಡರೊಂದಿಗೆ ನಡೆದ ಸಭೆ ಯಶಸ್ವಿಯಾದ್ದರಿಂದ ಅಧಿಕಾರಿಗಳು ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಪ್ರತಿಮೆಯನ್ನು ಅದೇ ಸ್ಥಳದಲ್ಲೇ ಉಳಿಸಲು ಹಾಗೂ ವೃತ್ತಕ್ಕೆ ಶಿವಾಜಿ ಹೆಸರಿಡಲು ಕನ್ನಡ ಹಾಗೂ ಮರಾಠಿ ಭಾಷಿಕ ಮುಖಂಡರು ಸಭೆಯಲ್ಲಿ ಸಮ್ಮತಿಸಿದ್ದರು. ಹಲವು ಗಂಟೆಗಳ ಸಭೆಯ ಬಳಿಯ ಈ ನಿರ್ಧಾರಕ್ಕೆ ಬರಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.