ಚಿತ್ರದುರ್ಗ: ಹೊಸದುರ್ಗ ತಾಲ್ಲೂಕು ಸಾಣೇಹಳ್ಳಿಯ ಶಿವಕುಮಾರ ಕಲಾ ಸಂಘ ಪ್ರದಾನ ಮಾಡುವ ಶಿವಕುಮಾರ ಪ್ರಶಸ್ತಿಗೆ ಸಿನಿಮಾ ನಿರ್ದೇಶಕ ಟಿ.ಎಸ್. ನಾಗಾಭರಣ ಆಯ್ಕೆಯಾಗಿದ್ದಾರೆ.
ರಂಗಭೂಮಿಗೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.
ಪ್ರಶಸ್ತಿಯು ₹ 50 ಸಾವಿರ ನಗದು ಹಾಗೂ ಫಲಕ ಒಳಗೊಂಡಿರುತ್ತದೆ. ನ. 7ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.