ತುಮಕೂರು: ‘ಸ್ವಾಮೀಜಿ ಅವರಿಗೆ ಶ್ವಾಸಕೋಶದ ಸೋಂಕು ಕಡಿಮೆ ಆಗಿದೆ. ಆದರೆ, ದೇಹದಲ್ಲಿ ಜೀವಸತ್ವದ ಅಂಶಗಳು ಹೆಚ್ಚಾಗಿಲ್ಲ. ಇದರಿಂದ ಶ್ವಾಸಕೋಶದಲ್ಲಿ ನೀರು ತುಂಬಿಕೊಳ್ಳುತ್ತಿದೆ. ಎರಡು ದಿನಕ್ಕೆ ಒಮ್ಮೆ ನೀರನ್ನು ಹೊರ ತೆಗೆಯುತ್ತಿದ್ದೇವೆ. ಜೀವಸತ್ವ ಹೆಚ್ಚಲು ಔಷಧಿ ನೀಡಲಾಗುತ್ತಿದೆ’ ಎಂದು ಸಿದ್ಧಗಂಗಾ ಆಸ್ಪತ್ರೆಯ ಮುಖ್ಯಸ್ಥ ಡಾ.ಪರಮೇಶ್ ಮಾಹಿತಿ ನೀಡಿದರು.
ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಶನಿವಾರ ಇಲ್ಲಿನ ಸಿದ್ಧಗಂಗಾ ಆಸ್ಪತ್ರೆಗೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯ ವಿಚಾರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.