ADVERTISEMENT

ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ: ಬಿಎಸ್‌ವೈ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2023, 4:45 IST
Last Updated 10 ಫೆಬ್ರುವರಿ 2023, 4:45 IST
   

ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡುವುದು ಬೇಡ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಪುನರುಚ್ಚರಿಸಿದ್ದಾರೆ.

ಈ ಸಂಬಂಧ ಗುರುವಾರ ಟ್ವೀಟ್‌ ಮಾಡಿರುವ ಅವರು, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತೀರ್ಮಾನದಿಂದ ಮನದುಂಬಿ ಬಂದಿದೆ. ಈ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಇಡುವುದು ಬೇಡ. ಕರ್ನಾಟಕದ ಯಾವುದೇ ಗಣ್ಯ ವ್ಯಕ್ತಿಗಳ ಹೆಸರು ಇಡುವುದು ಸೂಕ್ತ ಎಂದು ವಿನಯದಿಂದ ಮನವಿ ಮಾಡುತ್ತೇನೆ’ ಎಂದು ಹೇಳಿದರು.

ಈ ಹಿಂದೆ ಪ್ರಸ್ತಾವ ಬಂದಾಗ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಪತ್ರ ಬರೆದು ತಮ್ಮ ಹೆಸರು ಇಡುವುದು ಬೇಡ, ಬೇರೆ ಯಾವುದೇ ಗಣ್ಯರ ಹೆಸರನ್ನಿಡುವಂತೆ ಸೂಚಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.