ADVERTISEMENT

ಬಾಲಕಿ ಅಪಹರಣ ಪ್ರಕರಣ: ಆರೋಪಿ ಸುಳಿವಿಗೆ ₹ 50,000 ಬಹುಮಾನ

​ಪ್ರಜಾವಾಣಿ ವಾರ್ತೆ
Published 13 ಜುಲೈ 2022, 4:09 IST
Last Updated 13 ಜುಲೈ 2022, 4:09 IST
ಲಿಂಗರಾಜು ಅಲಿಯಾಸ್ ವಿರಾಟ್
ಲಿಂಗರಾಜು ಅಲಿಯಾಸ್ ವಿರಾಟ್   

ಬೆಂಗಳೂರು: ಹದಿನಾರು ವರ್ಷದ ಬಾಲಕಿಯನ್ನು ಅಪಹರಿಸಿಕೊಂಡು ಪರಾರಿಯಾಗಿರುವ ಆರೋಪಿ ಲಿಂಗರಾಜು ಅಲಿಯಾಸ್ ವಿರಾಟ್ (26) ಎಂಬಾತನಿಗಾಗಿ ಹುಡುಕಾಟ ನಡೆಸುತ್ತಿರುವ ಶಿವಮೊಗ್ಗ ಪೊಲೀಸರು, ಈತನ ಸುಳಿವು ನೀಡಿದವರಿಗೆ ₹ 50 ಸಾವಿರ ಬಹುಮಾನ ಘೋಷಿಸಿದ್ದಾರೆ.

‘ಶಿವಮೊಗ್ಗ ಜಯನಗರ ಠಾಣೆ ವ್ಯಾಪ್ತಿಯಲ್ಲಿ ವಾಸವಿದ್ದ ಬಾಲಕಿಯನ್ನು ಪುಸಲಾಯಿಸಿದ್ದ ಲಿಂಗರಾಜು, ಹಲವು ಆಮಿಷವೊಡ್ಡಿ 2021ರ ಡಿಸೆಂಬರ್ 27ರಂದು ಅಪಹರಿಸಿಕೊಂಡು ಪರಾರಿಯಾಗಿದ್ದಾನೆ. ಈತನ ಪತ್ತೆಗಾಗಿ ಹಲವೆಡೆ ಹುಡುಕಾಟ ನಡೆಸಲಾಗುತ್ತಿದ್ದು, ಸದ್ಯಕ್ಕೆ ಯಾವುದೇ ಸುಳಿವು ಲಭ್ಯವಾಗಿಲ್ಲ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಆರೋಪಿ ಬಗ್ಗೆ ಯಾರಿಗಾದರೂ ಸುಳಿವು ಸಿಕ್ಕರೆ, ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್– 9480803349, 9449584739 ಅಥವಾ ನಿಯಂತ್ರಣ ಕೊಠಡಿ 9480803300 ಸಂಖ್ಯೆಗೆ ಮಾಹಿತಿ ನೀಡಬಹುದು. ಸುಳಿವು ನೀಡಿದವರ ಹೆಸರು
ಗೌಪ್ಯವಾಗಿರಿಸಲಾಗುವುದು’ ಎಂದೂ ತಿಳಿಸಿದರು.

ADVERTISEMENT

ಸಿನಿಮಾದಲ್ಲಿ ನಟನೆ: ‘ಆರೋಪಿ ಲಿಂಗರಾಜು ಕೆಲ ಸಿನಿಮಾಗಳಲ್ಲೂ ನಟಿಸಿದ್ದ. ಚಾಲಕನಾಗಿ ಕೆಲಸ ಮಾಡುತ್ತಿದ್ದ ಈತ, ಬಾಲಕಿಯನ್ನು ಪರಿಚಯ ಮಾಡಿಕೊಂಡು ಪ್ರೀತಿಸುವ ನಾಟಕವಾಡಿ ಕರೆದೊಯ್ದಿರುವ ಶಂಕೆ ಇದೆ’ ಎಂದೂ ಹೇಳಿದರು.

ಹೇಬಿಯಸ್ ಕಾರ್ಪಸ್ ಸಲ್ಲಿಕೆ: ‘ಅಪಹರಣ ಆಗಿರುವ ಮಗಳನ್ನು ಹುಡುಕಿಸಿಕೊಡುವಂತೆ ಪೋಷಕರು ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಸಲ್ಲಿಸಿದ್ದಾರೆ. ಇದರ ವಿಚಾರಣೆ ನಡೆಯತ್ತಿದೆ’ ಎಂದು ಪೊಲೀಸ್ ಅಧಿಕಾರಿ ಹೇಳಿದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.