ADVERTISEMENT

ವಿಜ್ಞಾನೇಶ್ವರ ಅಧ್ಯಯನ ಪೀಠಕ್ಕೆ ಶಿವರಾಜ ಪಾಟೀಲ ನೇಮಕ

​ಪ್ರಜಾವಾಣಿ ವಾರ್ತೆ
Published 29 ಜನವರಿ 2021, 17:53 IST
Last Updated 29 ಜನವರಿ 2021, 17:53 IST
ನ್ಯಾ. ಶಿವರಾಜ ವಿ. ಪಾಟೀಲ
ನ್ಯಾ. ಶಿವರಾಜ ವಿ. ಪಾಟೀಲ   

ಧಾರವಾಡ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ವಿಜ್ಞಾನೇಶ್ವರ ಅಧ್ಯಯನ ಪೀಠದ ಮೊದಲ ಪ್ರಾಧ್ಯಾಪಕರಾಗಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಡಾ. ಶಿವರಾಜ ವಿ. ಪಾಟೀಲ ಅವರನ್ನು ನೇಮಕಗೊಳಿಸಿ ವಿಶ್ವವಿದ್ಯಾಲಯ ಆದೇಶ ಹೊರಡಿಸಿದೆ.

ಈ ಕುರಿತು ಶುಕ್ರವಾರ ಜರುಗಿದ ಸಿಂಡಿಕೇಟ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ₹1ಕೋಟಿ ಅನುದಾನದಡಿ ಕಾನೂನು ಮತ್ತು ನ್ಯಾಯಶಾಸ್ತ್ರ ಕುರಿತು ಹೆಚ್ಚಿನ ಅಧ್ಯಯನದ ಉದ್ದೇಶದಿಂದ ಈ ಪೀಠ ಸ್ಥಾಪನೆಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT