ADVERTISEMENT

ಮಧು ಬಂಗಾರಪ್ಪ ಪರ ಚುನಾವಣಾ ಪ್ರಚಾರಕ್ಕೆ ಹೋಗಿರಲಿಲ್ಲ: ಶಿವರಾಜ್‌ ಕುಮಾರ್‌

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2019, 12:51 IST
Last Updated 12 ಏಪ್ರಿಲ್ 2019, 12:51 IST
ಶಿವರಾಜ್‌ಕುಮಾರ್‌
ಶಿವರಾಜ್‌ಕುಮಾರ್‌   

ಬೆಂಗಳೂರು: ‘ನಾನು ಮಧು ಬಂಗಾರಪ್ಪ ಪರವಾಗಿ ಶಿವಮೊಗ್ಗಕ್ಕೆ ಚುನಾವಣಾ ಪ್ರಚಾರಕ್ಕೆ ಹೋಗಿಲ್ಲ. ‘ಕವಚ’ ಚಿತ್ರದ ಪ್ರಚಾರಕ್ಕೆ ಹೋಗಿದ್ದೆ’ ಎಂದು ನಟ ಶಿವರಾಜ್‌ಕುಮಾರ್‌ ಸ್ಪಷ್ಟಪಡಿಸಿದರು.

ನಗರದ ಕಂಠೀರವ ಸ್ಟುಡಿಯೊದಲ್ಲಿ ಶುಕ್ರವಾರ ವರನಟ ಡಾ.ರಾಜ್‌ಕುಮಾರ್‌ ಅವರ 13ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ರಾಜ್‌ ಸಮಾಧಿಗೆ ಪೂಜೆ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ಕವಚ’ ಚಿತ್ರದ ನೆಪದಲ್ಲಿ ಮಧು ಬಂಗಾರ‍ಪ್ಪ ಅವರ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ ಎಂಬ ಕುಮಾರ್‌ ಬಂಗಾರ‍ಪ್ಪ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು,‘ಅಭಿಮಾನಿಗಳು, ಸಿನಿಮಾ ಇಂಡಸ್ಟ್ರಿಯೇ ನನ್ನ ಕವಚ. ನಾನು ಯಾರ ಪರವೂ ಚುನಾವಣಾ ಪ್ರಚಾರಕ್ಕೆ ಹೋಗಿಲ್ಲ. ಅದು ಅವರ ವೈಯಕ್ತಿಕ ಅಭಿಪ್ರಾಯ. ಅದರ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.