ADVERTISEMENT

ಹರಿಹರಪ್ರಿಯಗೆ ‘ಶಿವರುದ್ರಪ್ಪ ರಾಷ್ಟ್ರೀಯ ಪುರಸ್ಕಾರ’

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2023, 16:03 IST
Last Updated 2 ಫೆಬ್ರುವರಿ 2023, 16:03 IST
ಪುಸ್ತಕಮನೆ ಹರಿಹರಪ್ರಿಯ
ಪುಸ್ತಕಮನೆ ಹರಿಹರಪ್ರಿಯ   

ಬೆಂಗಳೂರು: ಪ್ರೊ.ಜಿ.ಎಸ್. ಶಿವರುದ್ರಪ್ಪ ಮತ್ತು ಪ್ರೊ.ಯು.ಆರ್. ಅನಂತಮೂರ್ತಿ ಸಾಂಸ್ಕೃತಿಕ ಜಗತಿ ಜಂಟಿ ಕ್ರಿಯಾ ಸಮಿತಿ ನೀಡುವ ‘ರಾಷ್ಟ್ರಕವಿ ಪ್ರೊ.ಜಿ.ಎಸ್. ಶಿವರುದ್ರಪ್ಪ ರಾಷ್ಟ್ರೀಯ ಪುರಸ್ಕಾರ’ಕ್ಕೆ ಸಾಹಿತಿ ಪುಸ್ತಕಮನೆ ಹರಿಹರಪ್ರಿಯ ಆಯ್ಕೆಯಾಗಿದ್ದಾರೆ.

ಸಮಿತಿ ನೀಡುತ್ತಿರುವ ಪ್ರಥಮ ಪ್ರಶಸ್ತಿ ಇದಾಗಿದ್ದು, ಪ್ರಶಸ್ತಿಯು ₹ 25 ಸಾವಿರ ನಗದು ಒಳಗೊಂಡಿದೆ. ಇದೇ 7ರಂದು ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ಬೆಳಿಗ್ಗೆ 10 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸಾಹಿತಿ ಹಂ.ಪ. ನಾಗರಾಜಯ್ಯ ಸಮಾರಂಭ ಉದ್ಘಾಟಿಸಲಿದ್ದಾರೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಸಮಿತಿಯ ಕುಮಾರ್ ಕೆ.ಎಚ್. ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT