ADVERTISEMENT

ದೇಶದ್ರೋಹಿಗಳಿಗೆ ಕಂಡಲ್ಲಿ ಗುಂಡಿಕ್ಕಿ: ಶಾಸಕ ಅಪ್ಪಚ್ಚು ರಂಜನ್‌

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2020, 12:06 IST
Last Updated 24 ಫೆಬ್ರುವರಿ 2020, 12:06 IST
ಎಂ.ಪಿ.ಅಪ್ಪಚ್ಚು ರಂಜನ್‌
ಎಂ.ಪಿ.ಅಪ್ಪಚ್ಚು ರಂಜನ್‌   

ಸೋಮವಾರಪೇಟೆ (ಕೊಡಗು): ‘ಪಾಕಿಸ್ತಾನಕ್ಕೆ ಜಿಂದಾಬಾದ್’ ಎನ್ನುವ ದೇಶದ್ರೋಹಿಗಳಿಗೆ ಕಂಡಲ್ಲಿ ಗುಂಡಿಕ್ಕಬೇಕು’ ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಇಲ್ಲಿ ಸೋಮವಾರ ಕರೆ ನೀಡಿದರು.

‘ಇತ್ತೀಚಿನ ದಿನಗಳಲ್ಲಿ ದೇಶದ್ರೋಹದ ಹೇಳಿಕೆಗಳು ಹೆಚ್ಚಾಗುತ್ತಿವೆ. ವಿದ್ಯಾರ್ಥಿನಿ ಅಮೂಲ್ಯ ‘ಪಾಕಿಸ್ತಾನಕ್ಕೆ ಜಿಂದಾಬಾದ್’ ಎಂದು ಘೋಷಣೆ ಕೂಗಿದ್ದಾರೆ. ಖಾಸಗಿ ಕಂಪನಿ ಉದ್ಯೋಗಿ ಆರ್ದ್ರಾ ‘ಕಾಶ್ಮೀರ ಮುಕ್ತಿ’ ಭಿತ್ತಿಪತ್ರ ಪ್ರದರ್ಶಿಸಿದ್ದಾರೆ. ಇಂತಹವರಿಗೆ ಕಂಡಲ್ಲಿ ಗುಂಡಿಕ್ಕಿ’ ಎಂದು ಹೇಳಿದರು.

‘ಭಾರತದಲ್ಲಿ ನೆಲೆ ನಿಂತು ಪರದೇಶಕ್ಕೆ ಜೈ ಎನ್ನುವ ದೇಶದ್ರೋಹಿಗಳಿವರು. ಇವರಿಗೆ ನೀರು, ಗಾಳಿ, ಆಹಾರ ಎಲ್ಲವೂ ಈ ದೇಶದ್ದೇ ಬೇಕು. ಆದರೆ, ಇವರ ದೇಶಪ್ರೇಮ ಮಾತ್ರ ಪಾಕಿಸ್ತಾನಕ್ಕೆ. ಆ ದೇಶಕ್ಕೆ ತಮ್ಮ ನಿಷ್ಠೆ ತೋರಿಸುತ್ತಾರೆ’ ಎಂದು ಕಿಡಿಕಾರಿದರು.

ADVERTISEMENT

‘ದೇಶಕ್ಕೆ ಅಗೌರವ ತೋರಿಸಿ, ಪಾಕಿಸ್ತಾನದ ಬಗ್ಗೆ ವಾತ್ಸಲ್ಯವಿರುವವರು ಅಲ್ಲಿಗೆ ಹೋಗಿ ನೆಲೆಸಲಿ’.‘ದೇಶದ್ರೋಹಿಗಳ ಗಡಿಪಾರು ಮಾಡದಿದ್ದಲ್ಲಿ ದೇಶಕ್ಕೆ ಗಂಡಾಂತರ ಎದುರಾಗಲಿದೆ’ ಎಂದು ರಂಜನ್‌ ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.