ADVERTISEMENT

ಬಿಜೆಪಿ ಮುಖಂಡರಿಗೆ ಊಟ ಬಡಿಸಿದ ಎಸ್‌ಐ: ವಿಡಿಯೊ ವೈರಲ್‌

​ಪ್ರಜಾವಾಣಿ ವಾರ್ತೆ
Published 3 ಜನವರಿ 2021, 18:21 IST
Last Updated 3 ಜನವರಿ 2021, 18:21 IST

ಮಂಡ್ಯ: ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ ಹಾಗೂ ಬಿಜೆಪಿ ಮುಖಂಡರಿಗೆ ಶ್ರೀರಂಗಪಟ್ಟಣ ತಾಲ್ಲೂಕು ಕೆಆರ್‌ಎಸ್‌ ಠಾಣೆ ಸಬ್‌ಇನ್‌ಸ್ಪೆಕ್ಟರ್ ನವೀನ್‌ಗೌಡ ಸಮವಸ್ತ್ರದಲ್ಲೇ ಊಟ ಬಡಿಸುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಸಚಿವ ಸಿ.ಸಿ.ಪಾಟೀಲ ಭಾನುವಾರ ಜಿಲ್ಲೆಯ ವಿವಿಧೆಡೆ ಕಲ್ಲುಗಣಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಧ್ಯಾಹ್ನ ಕೆಆರ್‌ಎಸ್‌ ಆವರಣದಲ್ಲಿರುವ ಮಯೂರ ಹೋಟೆಲ್‌ನಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಸಚಿವರ ಜೊತೆ ಬಿಜೆಪಿ ಮುಖಂಡರೂ ಊಟಕ್ಕೆ ಕುಳಿತಿದ್ದರು. ಈ ಸಂದರ್ಭದಲ್ಲಿ ನವೀನ್‌ಗೌಡ್‌ ಊಟ ಬಡಿಸಿದ್ದಾರೆ.

ಊಟ ಬಡಿಸುತ್ತಿರುವ ದೃಶ್ಯಗಳು ವಾಟ್ಸ್‌ ಆ್ಯಪ್‌, ಫೇಸ್‌ಬುಕ್‌ಗಳಲ್ಲಿ ಹರಿದಾಡುತ್ತಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಶಿಸ್ತು ಪಾಲಿಸಬೇಕಾದ ಪೊಲೀಸ್‌ ಅಧಿಕಾರಿ ರಾಜಕಾರಣಿ, ರಾಜಕೀಯ ಪಕ್ಷದ ಮುಖಂಡರಿಗೆ ಊಟ ಬಡಿಸುವ ಮೂಲಕ ವೃತ್ತಿಗೆ ಅಗೌರವ ತಂದಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗಿದೆ. ನವೀನ್‌ಗೌಡ ಪ್ರತಿಕ್ರಿಯೆ ದೊರೆಯಲಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.