ADVERTISEMENT

ಸಿದ್ಧಗಂಗಾಶ್ರೀಗೆ ಕಾಣಿಸಿಕೊಂಡ ಜ್ವರ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2018, 19:02 IST
Last Updated 20 ಡಿಸೆಂಬರ್ 2018, 19:02 IST
ಶಿವಕುಮಾರ ಸ್ವಾಮೀಜಿ
ಶಿವಕುಮಾರ ಸ್ವಾಮೀಜಿ   

ತುಮಕೂರು: ಚೆನ್ನೈನ ಡಾ.ರೇಲಾ ಇನ್‌ಸ್ಟಿಟ್ಯೂಟ್ ಆ್ಯಂಡ್ ಮೆಡಿಕಲ್ ಸೆಂಟರ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಬುಧವಾರ ಸಿದ್ಧಗಂಗಾ ಮಠಕ್ಕೆ ಮರಳಿರುವ ಡಾ.ಶಿವಕುಮಾರ ಸ್ವಾಮೀಜಿ ಅವರಿಗೆ ಗುರುವಾರ ಸಂಜೆ ಜ್ವರ ಕಾಣಿಸಿಕೊಂಡಿದೆ.

‘ಸ್ವಾಮೀಜಿಯವರಿಗೆ ಶಸ್ತ್ರಚಿಕಿತ್ಸೆ ಮಾಡಿದ ಭಾಗದಲ್ಲಿ ನೋವು ಕಾಣಿಸಿಕೊಂಡಿದ್ದರಿಂದ ಸ್ವಲ್ಪ ಜ್ವರ ಬಂದಿತ್ತು. ರೇಲಾ ಆಸ್ಪತ್ರೆ ವೈದ್ಯರ ಸಲಹೆಯಂತೆ ಚಿಕಿತ್ಸೆ ನೀಡಲಾಗಿದೆ’ ಎಂದು ವೈದ್ಯರು ತಿಳಿಸಿದ್ದಾರೆ.

‘ಬೆಳಿಗ್ಗೆ ಇಷ್ಟಲಿಂಗ ಪೂಜೆ ಮಾಡಿ ಅರ್ಧ ಇಡ್ಲಿ, ಹಣ್ಣಿನ ರಸ ಸೇವಿಸಿದ್ದರು’ ಎಂದು ಡಾ.ಪರಮೇಶ್ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.