ADVERTISEMENT

ಜಯದೇವ ಆಸ್ಪತ್ರೆ ವೈದ್ಯರಿಂದ ಸಿದ್ದಗಂಗಾಶ್ರೀ ತಪಾಸಣೆ: ಸಚಿವ ಶಿವಾನಂದ ಪಾಟೀಲ

​ಪ್ರಜಾವಾಣಿ ವಾರ್ತೆ
Published 10 ಜನವರಿ 2019, 7:12 IST
Last Updated 10 ಜನವರಿ 2019, 7:12 IST
ಸಿದ್ಧಗಂಗಾ ಆಸ್ಪತ್ರೆಗೆ ಆರೋಗ್ಯ ಸಚಿವ ಶಿವಾನಂದ ಪಾಟೀಲ ಗುರುವಾರ ಭೇಟಿ ನೀಡಿ ಸ್ವಾಮೀಜಿ ಆರೊಗ್ಯ ವಿಚಾರಿಸಿದರು.  
ಸಿದ್ಧಗಂಗಾ ಆಸ್ಪತ್ರೆಗೆ ಆರೋಗ್ಯ ಸಚಿವ ಶಿವಾನಂದ ಪಾಟೀಲ ಗುರುವಾರ ಭೇಟಿ ನೀಡಿ ಸ್ವಾಮೀಜಿ ಆರೊಗ್ಯ ವಿಚಾರಿಸಿದರು.     

ತುಮಕೂರು: ಜಯದೇವ ಆಸ್ಪತ್ರೆಯ ಡಾ.ಮಂಜುನಾಥ್ ನೇತೃತ್ವದ ವೈದ್ಯರ ತಂಡವು ಸಿದ್ಧಗಂಗಾಶ್ರೀ ಆರೋಗ್ಯ ತಪಾಸಣೆಯನ್ನು ಶುಕ್ರವಾರ ನಡೆಸಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ ಹೇಳಿದರು.

ಡಾ.ಶಿವಕುಮಾರ ಸ್ವಾಮೀಜಿ ಅವರ ಅರೋಗ್ಯ ವಿಚಾರಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಶಿವಕುಮಾರ ಸ್ವಾಮೀಜಿ ಅವರು ಬೇಗ ಗುಣಮುಖರಾಗುವ ವಿಶ್ವಾಸವಿದೆ. ಡಾ.ಪರಮೇಶ್ ಅವರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಮಗುವಿಗೆ ತಾಯಿ ಅರೈಕೆ ಮಾಡಿದ ಹಾಗೆ ಸ್ವಾಮೀಜಿ ಅವರನ್ನು ಆರೈಕೆ ಮಾಡುತ್ತಿದ್ದಾರೆ ಎಂದರು.

ADVERTISEMENT

ಸಿದ್ಧಗಂಗಾಶ್ರೀಗಳು ಮಾಡಿದ ರೀತಿ ಸಮಾಜ ಸೇವೆ ಬೇರೆ ಯಾರೂ ಈ ಭೂಮಿಯ ಮೇಲೆ ಮಾಡಲಿಕ್ಕಿಲ್ಲ ಎಂಬುದು ನನ್ನ ಭಾವನೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.