ADVERTISEMENT

ಸಿದ್ಧಗಂಗಾಶ್ರೀ ಆರೋಗ್ಯ ಸ್ಥಿರ

​ಪ್ರಜಾವಾಣಿ ವಾರ್ತೆ
Published 13 ಜನವರಿ 2019, 20:34 IST
Last Updated 13 ಜನವರಿ 2019, 20:34 IST
ಡಾ.ಶಿವಕುಮಾರ ಸ್ವಾಮೀಜಿ
ಡಾ.ಶಿವಕುಮಾರ ಸ್ವಾಮೀಜಿ   

ತುಮಕೂರು: ‘ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣಿಸುತ್ತಿಲ್ಲ. ಅವರ ದೇಹದಲ್ಲಿನ ಅಲ್ಬುಮಿನ್ ಪೋಷಕಾಂಶ 3.1 ಪ್ರಮಾಣದಿಂದ 2.6ಕ್ಕೆ ತಗ್ಗಿದೆ. ಎರಡು ಗಂಟೆಗೆ ಒಮ್ಮೆ ‌ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗುತ್ತಿದೆ’ ಎಂದು ಸಿದ್ಧಗಂಗಾ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಪರಮೇಶ್ ಮಾಹಿತಿ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶ್ವಾಸಕೋಶದಲ್ಲಿ ತುಂಬಿದ್ದ ನೀರನ್ನು ಹೊರತೆಗೆಯಲಾಗಿದೆ. ಸ್ವಾಭಾವಿಕವಾಗಿ ಶರೀರದಲ್ಲಿ ಉತ್ಪತ್ತಿ ಆಗಬೇಕಾಗಿದ್ದ ಪೋಷಕಾಂಶ, ರಕ್ತದ ಕಣಗಳು ಉತ್ಪತ್ತಿ ಆಗುತ್ತಿಲ್ಲ’ ಎಂದು ತಿಳಿಸಿದರು.

‘ಬಾಹ್ಯವಾಗಿ ಪೋಷಕಾಂಶಗಳನ್ನು ಹೆಚ್ಚು ದಿನ ನೀಡಲು ಸಾಧ್ಯವಿಲ್ಲ. ಹೀಗೆ, ಮಾಡಿದರೆ ಅಡ್ಡ ಪರಿಣಾಮಗಳಾಗು
ತ್ತವೆ. ಸ್ವಾಮೀಜಿ ಅವರಿಗೆ ದ್ರವ ರೂಪದ ಆಹಾರ ನೀಡಲಾಗುತ್ತಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.