ತುಮಕೂರು: ‘ಡಾ.ಶಿವಕುಮಾರ ಸ್ವಾಮೀಜಿ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿರುವುದೇ ಪವಾಡ’ ಎಂದು ಸಿದ್ಧಗಂಗಾ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸ್ವಾಮೀಜಿ ಅವರ ಆಪ್ತ ವೈದ್ಯ ಡಾ.ಪರಮೇಶ್ ಅಭಿಪ್ರಾಯಪಟ್ಟರು.
‘ಸ್ವಾಮೀಜಿ ಮಠದಿಂದ ಆಸ್ಪತ್ರೆಗೆ ಸ್ಥಳಾಂತರಗೊಂಡ ಬಳಿಕ ಬಹಳ ಚೇತರಿಕೆ ಕಂಡಿದ್ದಾರೆ. ಆದಷ್ಟು ಬೇಗ ಅವರು ಗುಣಮುಖರಾಗಿ ಮಠಕ್ಕೆ ತೆರಳುವ ರೀತಿಯಲ್ಲಿ ಚಿಕಿತ್ಸೆಯನ್ನು ನೀಡುತ್ತಿದ್ದೇವೆ’ ಎಂದು ಮಾಧ್ಯಮದವರಿಗೆ ಹೇಳಿದರು.
‘ಪರಿಣಾಮಕಾರಿ ಚಿಕಿತ್ಸೆ ನೀಡುತ್ತಿರುವುದರಿಂದ ಸೋಂಕು ಕಡಿಮೆ ಆಗಿದೆ. ಪ್ರೊಟೀನ್ ಅಂಶವು ಸ್ವಲ್ಪ ಕಡಿಮೆ ಆಗಿದೆ. ಅದನ್ನು ಹೆಚ್ಚಿಸಲು ಚಿಕಿತ್ಸೆ ನೀಡಲಾಗಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.