ಹುಬ್ಬಳ್ಳಿ: ವರುಣಾ ಅಥವಾ ಚಾಮರಾಜಪೇಟೆ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸಲಿ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದರು.
ಹುಬ್ಬಳ್ಳಿಯಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ವಿಮಾನದಲ್ಲಿ ಅವರೊಂದಿಗೆ ಪ್ರಯಾಣಿಸುವಾಗ (ಬೆಂಗಳೂರಿನಿಂದ ಹುಬ್ಬಳ್ಳಿ ಗೆ ಬರುವಾಗ) ಈ ವಿಷಯ ಪ್ರಸ್ತಾಪಿಸಿದ್ದೇನೆ. ರಾಜ್ಯದ ಜನರಿಗಾಗಿ ಚಾಮರಾಜಪೇಟೆ ಕ್ಷೇತ್ರವನ್ನು ಸಿದ್ದರಾಮಯ್ಯ ಅವರಿಗೆ ಬಿಟ್ಟುಕೊಡಲು ಸಿದ್ದ. ಚುನಾವಣೆ ಸಂದರ್ಭದಲ್ಲಿ ಅವರು ಇಡೀ ರಾಜ್ಯದಾದ್ಯಂತ ಪ್ರವಾಸ ಮಾಡಬೇಕಾಗುತ್ತದೆ.
ಅವರು ಮುಖ್ಯಮಂತ್ರಿ ಆಗಿದ್ದಾಗ ಉತ್ತಮಕೆಲಸ ಮಾಡಿದ್ದಾರೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.