ಕಲಬುರಗಿ: ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸತ್ಯ ಹೇಳುವುದು ಗೊತ್ತೇ ಇಲ್ಲ, ಬರೀ ಸುಳ್ಳು ಹೇಳುತ್ತಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮ್ಮಿಶ್ರ ಸರ್ಕಾರ ಪತನವಾಗಲು ನಾನು ಕಾರಣ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಅಂದು ವಿಧಾನಸಭೆಯಲ್ಲಿ ಅವಿಶ್ವಾಸ ಗೊತ್ತುವಳಿ ಸಂದರ್ಭ ಮಾಡಿದ ಭಾಷಣದಲ್ಲಿ ಸರ್ಕಾರ ಪತನಕ್ಕೆ ಬಿ.ಎಸ್.ಯಡಿಯೂರಪ್ಪನವರು ಕಾರಣ ಎಂದಿದ್ದರು. ಅವರಿಗೆ ಎರಡು ನಾಲಿಗೆ ಇದೆಯಾ? ಮೈಸೂರಿನ ಜನರನ್ನು ನನ್ನ ವಿರುದ್ಧ ಎತ್ತಿಕಟ್ಟಲು ಯತ್ನಿಸುತ್ತಿದ್ದಾರೆ’ ಎಂದು ಹೇಳಿದರು.
ಕುಮಾರಸ್ವಾಮಿ ನನ್ನ ಜತೆ ಕಾಲು ಕೆರೆದು ಜಗಳಕ್ಕೆ ಬರುತ್ತಿದ್ದಾರೆ. ಶಾಸಕರು ಬಿಜೆಪಿ ಜತೆ ತೆರಳುವ ಸುಳಿವು ಸಿಕ್ಕಿದಾಗ ಅವರು ಅಮೆರಿಕದಲ್ಲಿದ್ದರು. ಬನ್ನಿ ಎಂದು ಕರೆದರೂ ಬರಲಿಲ್ಲ. ಈಗ ನನ್ನ ಮೇಲೆ ಆರೋಪ ಮಾಡುತ್ತಾರೆ. ಅವರ ಆರೋಪಗಳಿಗೆ ಉತ್ತರಿಸಿ ಸಾಕಾಗಿದೆ. ಇನ್ನು ಅವರ ಹೇಳಿಕೆಗಳಿಗೆ ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.