ಬೆಂಗಳೂರು: ‘ಪಾದಯಾತ್ರೆಯನ್ನು ಕಾಂಗ್ರೆಸ್ ಪಕ್ಷ ಹೈಜಾಕ್ ಮಾಡಿದೆ’ ಎಂಬ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ನಾನು ಮುಖ್ಯಮಂತ್ರಿಯಾಗಿದ್ದಾಗ ಮೇಕೆದಾಟು ಯೋಜನೆಯ ಡಿಪಿಆರ್ ಸಿದ್ಧಪಡಿಸಿದ್ದೆ. ಹೈಜಾಕ್ ಮಾಡಲು ಕುಮಾರಸ್ವಾಮಿ, ಮೇಕೆದಾಟು ಯೋಜನೆ ಮಾಡಿದ್ದರಾ?’ ಎಂದು ಕಿಡಿಕಾರಿದರು.
‘ಮೇಕೆದಾಟು ಯೋಜನೆ ಅನುಷ್ಠಾನಗೊಳಿಸಲು ನಾವೀಗ ಪಾದಯಾತ್ರೆ ಮಾಡುತ್ತಿದ್ದೇವೆ. ಇದರಿಂದ ಕುಮಾರಸ್ವಾಮಿಗೆ ಏಕೆ ಹೊಟ್ಟೆಯುರಿ’ ಎಂದು ಪ್ರಶ್ನಿಸಿದ ಅವರು, ‘ಪಾದಯಾತ್ರೆ ಹೈಜಾಕ್ ಎಂದರೆ ಏನರ್ಥ. ಅದೇನು ಸರ್ಕಾರಿ ಕಾರ್ಯಕ್ರಮವಾ ಹೈಜಾಕ್ ಮಾಡಲು’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.