ತುಮಕೂರು: ‘ಕೆ.ಎಸ್. ಈಶ್ವರಪ್ಪನವರೇ ನಿಮಗೆ ಸಮುದಾಯದ ಬಗ್ಗೆ ನಿಜವಾದ ಕಾಳಜಿ ಇದ್ದರೆ ಕುರುಬರಿಗೆ ಮೊದಲು ಎಸ್.ಟಿ ಮೀಸಲಾತಿ ಕೊಡಿಸಿ. ನಿಮ್ಮ ಕೈಯಲ್ಲೇ ಅಧಿಕಾರವಿದೆ. ಬೂಟಾಟಿಕೆ, ನಾಟಕ ಬಿಟ್ಟು ನಿಮ್ಮ ಸಾಮರ್ಥ್ಯ ತೋರಿಸಿ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಅವರಿಗೆ ಸವಾಲು ಹಾಕಿದ್ದಾರೆ.
ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕುರುಬರ ಜಿಲ್ಲಾ ಮಟ್ಟದ ಜಾಗೃತಿ ಸಭೆಯಲ್ಲಿ ಮಾತನಾಡಿ, ‘ಕುರುಬ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್ಟಿ) ಮೀಸಲಾತಿ ಕೊಡಬೇಕು. ಮೀಸಲಾತಿ ಸಿಗುವವರೆಗೂ ಹೋರಾಟ ನಿಲ್ಲಬಾರದು’ ಎಂದು ಅವರು ಕುರುಬ ಸಮುದಾಯಕ್ಕೆ ಕರೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.