ಬೆಂಗಳೂರು: ಸಿದ್ದರಾಮಯ್ಯನವರ ಸುಳ್ಳುಗಳನ್ನು ಜನರು ನಂಬುವುದಿಲ್ಲವೆಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ವಾಗ್ದಾಳಿ ನಡೆಸಿದ್ದಾರೆ.
ಬುಧವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಲೋಕಾಯುಕ್ತದ ಕೈ ಕಟ್ಟಿ ನೀರಿಗೆ ಬಿಟ್ಟ ಅರ್ಕಾವತಿ ಹಗರಣದ ಪಿತಾಮಹ ಸಿದ್ದರಾಮಯ್ಯ ಅವರ ಸುಳ್ಳುಗಳ ಸರಮಾಲೆಯನ್ನು ಕೇಳಿ, ಡಿ.ಕೆ.ಶಿವಕುಮಾರ್ ಅವರು ಅಹುದಹುದೆನ್ನಬಹುದೇ ವಿನಃ ನಾಡಿನ ಜನರು ನಂಬಲಾರರು’ ಎಂದು ಟೀಕಿಸಿದ್ದಾರೆ.
'ಡಿವೈಎಸ್ಪಿ ಗಣಪತಿ ಅವರ ಆತ್ಮಹತ್ಯೆಗೆ ಕಾರಣವೇನೆಂದು ಕೇಳಿದರೆ ಕಳ್ಳರಂತೆ ನುಣುಚಿಕೊಳ್ಳುವುದೇಕೆ ಸಿದ್ದರಾಮಯ್ಯ ಅವರೇ?’ ಎಂದು ಪ್ರಶ್ನಿಸಿದ್ದಾರೆ.
‘ಕಾಂಗ್ರೆಸ್ ಸುಳ್ಳಿನ ಫ್ಯಾಕ್ಟರಿಯ ಸಿಇಒ ಆಗಲು ಪೈಪೋಟಿ ನಡೆಸುತ್ತಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ‘ದಿನಕ್ಕೊಂದು ಸುಳ್ಳು’ ಎಂಬ ತತ್ವಕ್ಕೆ ಮೊರೆ ಹೋಗಿದ್ದಾರೆ. ತಾವು ಬೆಳೆಸಿದ ಭ್ರಷ್ಟರನ್ನು ಬಿಜೆಪಿ ಸರ್ಕಾರ ಮಟ್ಟ ಹಾಕುತ್ತಿದೆ ಎಂಬ ಭಯ ಅವರಲ್ಲಿ ಅಸ್ಥಿರತೆ ಉಂಟುಮಾಡಿದೆ’ ಎಂದು ಟ್ವೀಟಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.