ADVERTISEMENT

ಕೃಷಿ ಸಚಿವರ ಹೇಳಿಕೆಗೆ ಖಂಡನೆ; ರಾಜೀನಾಮೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2020, 15:24 IST
Last Updated 3 ಡಿಸೆಂಬರ್ 2020, 15:24 IST
ಸಿದ್ದರಾಮಯ್ಯ
ಸಿದ್ದರಾಮಯ್ಯ    

ಮೈಸೂರು: ‘ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂಬ ಕೃಷಿ ಸಚಿವ ಬಿ.ಸಿ.ಪಾಟೀಲ ಅವರ ಹೇಳಿಕೆ ಖಂಡನೀಯ. ರೈತರು ಸ್ವಾಭಿಮಾನಿಗಳು. ಅವರನ್ನು ಸಂಕಷ್ಟಕ್ಕೆ ನೂಕಿರುವುದು ಕೇಂದ್ರ ಮತ್ತು ರಾಜ್ಯ ಸರ್ಕಾರ’ ಎಂದು ಸಿದ್ದರಾಮಯ್ಯ ಹರಿಹಾಯ್ದರು.

ಟ್ವೀಟ್‌ ಮೂಲಕ ತರಾಟೆ: ‘ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳಲ್ಲ ಬಿ.ಸಿ.ಪಾಟೀಲ ಅವರೇ, ಹಣ-ಅಧಿಕಾರಕ್ಕಾಗಿ ಆತ್ಮವನ್ನು ಮಾರಿಕೊಂಡವರು ಹೇಡಿಗಳು. ಅನ್ನ ಕೊಡುವ ರೈತರನ್ನು ನಿಂದಿಸಿ ಉಂಡಮನೆಗೆ ದ್ರೋಹ ಬಗೆಯುವ ತಮಗೆ ಒಂದು ಕ್ಷಣವೂ ಕೃಷಿ ಖಾತೆಯಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ’ ಎಂದು ಟ್ವೀಟ್‌ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ.

‘ಮಳೆ ಮತ್ತು ಪ್ರವಾಹದಿಂದ ಸರ್ವಸ್ವವನ್ನು ಕಳೆದುಕೊಂಡು ಬೀದಿಪಾಲಾಗಿರುವ ರೈತರಿಗೆ, ಪರಿಹಾರಕೊಟ್ಟು ನೆರವಾಗುವ ಯೋಗ್ಯತೆ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಇಲ್ಲ. ಗಾಯದ ಮೇಲೆ ಬರ ಎಳೆದಂತೆ ಅದೇ ರೈತರನ್ನು ಹೇಡಿಗಳೆಂದು ಜರಿಯುತ್ತೀರಾ? ಹೊಟ್ಟೆಗೆ ಏನು ತಿನ್ನುತ್ತೀರಾ?’ ಎಂದು ಕಿಡಿಕಾರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.