ಬೆಂಗಳೂರು:ಸಿದ್ದರಾಮಯ್ಯ ಅವರಿಗೆ ನನ್ನ ಮೇಲೆ ವಿಶೇಷ ಕಾಳಜಿ ಹಾಗೂ ಪ್ರೀತಿ ಇದೆ. ನನ್ನ ಬಗ್ಗೆ ಅವರು ಪ್ರೀತಿಯಿಂದ ಮಾತನಾಡಿರಬಹದು. ಅದರಲ್ಲಿ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿಗೆ ಬಂದಾಗ ನನ್ನ ಅಭಿಮಾನಿಗಳು ಪಕ್ಷಾತೀತ ಸ್ವಾಗತ ಮಾಡಿದ್ದಾರೆ. ಜೆಡಿಎಸ್ ಕಾರ್ಯಕರ್ತರು, ಕನ್ನಡ ಸಂಘಟನೆ ನಾಯಕರು ಬಂದಿದ್ದರು. ನಾನು ಯಾರನ್ನೂ ಬರಬೇಡಿ ಎಂದು ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ಕಚೇರಿ ನನಗೆ ದೇವಸ್ಥಾನವಿದ್ದಂತೆ ಅದಕ್ಕೆ ಮೊದಲು ಪಕ್ಷದ ಕಚೇರಿಗೆ ಭೇಟಿ ನೀಡಿದ್ದೆ. ಇಂದು ಸಹ ಜೆಡಿಎಸ್ ಶಾಸಕರು ನನ್ನ ಮನೆಗೆ ಬಂದು ಭೇಟಿ ಮಾಡಿದ್ದಾರೆ. ಅವರನ್ನು ಬರಬೇಡಿ ಎಂದು ಹೇಳಲು ಸಾಧ್ಯವೇ? ನನ್ನನ್ನು ಯಾರು ಬೇಕಾದರೂ ಭೇಟಿ ಮಾಡಲಿ ನಾನು ಅದಕ್ಕೆ ಆಕ್ಷೇಪ ಮಾಡಲ್ಲ. ನಾನು ನನ್ನ ವಕೀಲರನ್ನು ಭೇಟಿಮಾಡಬೇಕಿದೆ. ಇದಾದ ಬಳಿಕ ಮುಂದಿನ ಕಾರ್ಯಕ್ರಮ ಕುರಿತು ಮಾಹಿತಿ ನೀಡುತ್ತೇನೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.