ಮಡಿಕೇರಿ: ‘ಕೊಡವರೂ ಬೀಫ್ ತಿನ್ನುತ್ತಾರೆ ಎಂಬ ನನ್ನ ಹೇಳಿಕೆ ತಪ್ಪು ಗ್ರಹಿಕೆಯಿಂದ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದರಿಂದ ಕೊಡವ ಸಮುದಾಯಕ್ಕೆ ನೋವಾಗಿದ್ದರೆ ಈ ಬಗ್ಗೆ ನಾನು ವಿಷಾದಿಸುತ್ತೇನೆ. ನನ್ನ ನೆರೆಯ ಜಿಲ್ಲೆಯಾದ ಕೊಡಗಿನ ಸಂಸ್ಕೃತಿ ಬಗ್ಗೆ ನನಗೆ ಅರಿವಿದೆ; ವಿಶೇಷವಾದ ಗೌರವವೂ ಇದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶನಿವಾರ ರಾತ್ರಿ ಟ್ವೀಟ್ ಮಾಡಿದ್ದಾರೆ.
ಮೈಸೂರಿನಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮವೊಂದರಲ್ಲಿ ಬೀಫ್ ಕುರಿತು ಅವರು ನೀಡಿದ್ದ ಹೇಳಿಕೆಯಿಂದ ಕೊಡಗು ಜಿಲ್ಲೆಯ ಕೊಡವ ಸಮುದಾಯದಿಂದ ಆಕ್ರೋಶ ವ್ಯಕ್ತವಾಗಿತ್ತು.
ಇದನ್ನೂ ಓದಿ...‘ಕೊಡವರೂ ಬೀಫ್ ತಿನ್ನುತ್ತಾರೆ’: ಸಿದ್ದರಾಮಯ್ಯ ಹೇಳಿಕೆಗೆ ಕೊಡವರ ಆಕ್ರೋಶ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.