ADVERTISEMENT

ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಸಾಯಿಸುತ್ತಿದ್ದಾರೆ: ಕೆ. ಎಸ್‌. ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2019, 7:41 IST
Last Updated 30 ನವೆಂಬರ್ 2019, 7:41 IST
   

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಪ್ಪು ಆವರಿಸಿದೆ. ಇನ್ನಾದರೂದೇಶ ಮತ್ತು ಜನರ ಅಭಿವೃದ್ಧಿ ಬಗ್ಗೆ ಅವರು ಧ್ಯಾನ ಮಾಡಲಿ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅವರ ಸಾವಿನ ಬಗ್ಗೆ ನಾನುಎಲ್ಲಿಯೂ ಮಾತನಾಡಿಲ್ಲ. ಅವರುನೂರು ವರ್ಷ ಆರೋಗ್ಯ ಪೂರ್ಣವಾಗಿ ಜೀವಿಸಲಿ,’ಎಂದು ತಿಳಿಸಿದರು.

‘ನನ್ನ ಸಾವನ್ನು ಬಯಸುವವರಿಗೆ ನಾನು ದೀರ್ಘಾಯುಷ್ಯವನ್ನು ಹಾರೈಸುತ್ತೇನೆ. ಅವರುನೂರುಕಾಲ ಬಾಳಲಿ,’ ಎಂದು ಈಶ್ವರಪ್ಪ ಅವರನ್ನು ಗುರಿಯಾಗಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಟ್ವೀಟ್‌ ಮಾಡಿದ್ದರು ಎನ್ನಲಾಗಿದೆ.

ADVERTISEMENT

‘ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಸಾಯಿಸುತ್ತಿದ್ದಾರೆ. ಅವರು ಯಾವ ಪಕ್ಷಕ್ಕೆ ಹೋಗುತ್ತಾರೋ ಆ ಎಲ್ಲ ಪಕ್ಷಗಳನ್ನೂ ಮುಗಿಸುತ್ತಾರೆ,’ಎಂದು ಹೇಳಿದರು.

‘ಈಗ ಮತ್ತೆ ಮುಖ್ಯಮಂತ್ರಿ ಆಗುತ್ತೇನೆ ಎಂದು ಹುಚ್ಚುಚ್ಚಾಗಿ ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಹುಚ್ಚು ಹಿಡಿದಿರಬೇಕು,’ ಎಂದು ಈಶ್ವರಪ್ಪಲೇವಡಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.