ಬೆಳಗಾವಿ: ‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಟೀಕಿಸಿದರು.
ಇಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಯವರು ಕುದುರೆ ವ್ಯಾಪಾರದಂತಹ ನೀಚ ರಾಜಕೀಯ ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿರುವುದು ಸರಿಯಲ್ಲ. ಅವರೇನು ಮೂಲ ಕಾಂಗ್ರೆಸ್ನವರೇ? ಅವರು ಬಳಸಿದ ಪದ ಖಂಡನೀಯವಾದುದು’ ಎಂದರು.
‘ಬಿಜೆಪಿ ಜಗತ್ತಿನ ಅತ್ಯಂತ ದೊಡ್ಡ ಪಕ್ಷ. ಯಾವುದೇ ಕುಟುಂಬಕ್ಕೆ ಸಂಬಂಧಿಸಿದ್ದಲ್ಲ. ಇಲ್ಲಿ ದುಡಿದ, ಸಾಮಾನ್ಯ ಚಹಾ ಮಾರುತ್ತಿದ್ದ ವ್ಯಕ್ತಿ ಪ್ರಧಾನಿ ಆಗಿದ್ದಾರೆ. ಸಾಮಾನ್ಯ ಕಾರ್ಯಕರ್ತ ಅಮಿತ್ ಶಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.