ADVERTISEMENT

ಸಿದ್ದರಾಮಯ್ಯ ಹೃದಯದಿಂದ ಮಾತನಾಡುತ್ತಿಲ್ಲ: ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 26 ಜನವರಿ 2023, 6:32 IST
Last Updated 26 ಜನವರಿ 2023, 6:32 IST
ವಿ.ಸೋಮಣ್ಣ
ವಿ.ಸೋಮಣ್ಣ    

ಚಾಮರಾಜನಗರ: 'ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೃದಯದಿಂದ ಮಾತನಾಡುತ್ತಿಲ್ಲ. ಕಂಠದಿಂದ ಈಚೆಗೆ ಮಾತನಾಡುತ್ತಿದ್ದಾರೆ' ಎಂದು ವಸತಿ ಮತ್ತು ಮೂಲಸೌಕರ್ಯ ಸಚಿವ ವಿ.ಸೋಮಣ್ಣ ಗುರುವಾರ ಹೇಳಿದರು.

ಬಿಜೆಪಿ ಸಚಿವರ ಕುರಿತಾಗಿ ಸಿದ್ದರಾಮಯ್ಯ ಅವರು ಆಲಿಬಾಬಾ ಮತ್ತು 40 ಕಳ್ಳರು ಎಂದು ಹೇಳಿರುವುದಕ್ಕೆ ನಗರದಲ್ಲಿ ಪ್ರತಿಕ್ರಿಯಿಸಿರುವ ಅವರು,' ಅವರ ಬಗ್ಗೆ ಗೌರವವಿದೆ. ನಾನು ಮಾತನಾಡುವುದಕ್ಕೆ ಶುರು ಮಾಡಿದರೆ ವಿಚಾರ ಎಲ್ಲೆಲ್ಲೋ ಹೋಗುತ್ತದೆ. ಹಾಗಾಗಿ ಹೆಚ್ಚು ಮಾತನಾಡುವುದಿಲ್ಲ' ಎಂದರು.

200 ಯುನಿಟ್ ಉಚಿತ ವಿದ್ಯುತ್ ನೀಡುವ ಕಾಂಗ್ರೆಸ್ ಭರವಸೆ ಬಗ್ಗೆ ಪ್ರಸ್ತಾಪಿಸಿದ ಅವರು, 'ಕಾಂಗ್ರೆಸ್ ಆಡಳಿತದಲ್ಲಿರುವ ರಾಜಸ್ಥಾನ ಹಾಗೂ ಇತರ ರಾಜ್ಯಗಳಲ್ಲಿ ಯಾಕೆ ಈ ಯೋಜನೆ ಜಾರಿಗೆ ತಂದಿಲ್ಲ? ರಾಜ್ಯದಲ್ಲಿ ವಿದ್ಯುತ್ ಕಂಪನಿಗಳ ನೌಕರರಿಗೆ ಇದ್ದ ಉಚಿತ ವಿದ್ಯುತ್ ಸೌಲಭ್ಯವನ್ನು ವಾಪಸ್ ಪಡೆದವರು ಯಾರು? 75 ವರ್ಷಗಳ ಅವಧಿಯಲ್ಲಿ ಹೆಚ್ಚು ಕಾಲ ಆಳ್ವಿಕೆ ಮಾಡಿದವರಿಗೆ 5-10 ವರ್ಷಗಳ ಕಾಲ ತಡೆಯುವುದಕ್ಕೆ ಆಗುತ್ತಿಲ್ಲ' ಎಂದು ವ್ಯಂಗ್ಯವಾಡಿದರು.

ADVERTISEMENT

ನನ್ನ ಕ್ಷೇತ್ರ ಗೋವಿಂದರಾಜನಗರ: ಚಾಮರಾಜನಗರ ಕ್ಷೇತ್ರದಿಂದ ಸ್ಪರ್ಧಿಸುತ್ತೀರಾ ಎಂದು ಕೇಳಿದ್ದಕ್ಕೆ, 'ನನ್ನ ಕ್ಷೇತ್ರ ಗೋವಿಂದರಾಜನಗರ. 35-40 ಕ್ಷೇತ್ರಗಳಲ್ಲಿ ನಾನು ಕೆಲಸ ಮಾಡಿದ್ದೇನೆ. ನನಗೆ ಗೋವಿಂದರಾಜನಗರ ಇದೆ. ಎಲ್ಲಿ ಸ್ಪರ್ಧಿಸಬೇಕು ಎಂದು ಹೈಕಮಾಂಡ್ ನಿರ್ಧರಿಸುತ್ತದೆ' ಎಂದು ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.