ಬೆಂಗಳೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅಸ್ವಸ್ಥಗೊಂಡಿದ್ದು, ಮೇಕೆದಾಟು ಪಾದಯಾತ್ರೆಯಲ್ಲಿ ಮಂಗಳವಾರದಿಂದ ( ಜ.11) ಭಾಗವಹಿಸಲಿದ್ದಾರೆ.
ಪಾದಯಾತ್ರೆಯ ಉದ್ಘಾಟನೆಯಲ್ಲಿ ಭಾಗವಹಿಸಿದ್ದ ಅವರು, ಸ್ವಲ್ಲ ದೂರದವರೆಗೆ ನಡೆದಿದ್ದರು. ಬಳಿಕ, ಅನಾರೋಗ್ಯದ ಕಾರಣಕ್ಕೆ ಅರ್ಧದಿಂದಲೇ ಪಾದಯಾತ್ರೆಯಿಂದ ವಾಪಾಸಾಗಿದ್ದರು.
ಸುಸ್ತು, ಜ್ವರದಿಂದ ಬಳಲಿದ್ದ ಅವರು ಬೆಂಗಳೂರಿಗೆ ವಾಪಾಸಾಗಿ ಕುಟುಂಬದ ವೈದ್ಯರಿಂದ ಚಿಕಿತ್ಸೆ ಪಡೆದು, ಅವರ ಸಲಹೆಯಂತೆ ವಿಶ್ರಾಂತಿ ಪಡೆದಿದ್ದರು.
ವೈದ್ಯರ ಸಲಹೆ ಮೇರೆಗೆ ಸಿದ್ದರಾಮಯ್ಯ ಅವರು ಸೋಮವಾರ ಕೂಡಾ ತಮ್ಮ ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಮಂಗಳವಾರದಿಂದ ಮತ್ತೆ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಇದನ್ನೂ ಓದಿ:
ಮೇಕೆದಾಟು: ಡಿಕೆಶಿ, ಸಿದ್ದರಾಮಯ್ಯ ಸೇರಿ 35 ಜನರ ವಿರುದ್ಧ ಪ್ರಕರಣ ದಾಖಲು
ಮೇಕೆದಾಟು: ಎರಡನೇ ದಿನದ ಪಾದಯಾತ್ರೆ ಆರಂಭ
ಮೇಕೆದಾಟು ಪಾದಯಾತ್ರೆ: ಕೋವಿಡ್ ಪರೀಕ್ಷೆ ನಿರಾಕರಿಸಿದ ಡಿ.ಕೆ. ಶಿವಕುಮಾರ್
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.