ADVERTISEMENT

ಹೇಳಿಕೆಯಲ್ಲಿ ನನ್ನ ಹೆಸರಿಲ್ಲದಿದ್ದರೆ ಪ್ರತಿಕ್ರಿಯಿಸಲ್ಲ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2023, 12:46 IST
Last Updated 9 ಸೆಪ್ಟೆಂಬರ್ 2023, 12:46 IST
ರಮ್ಯಾ ಹೇಳಿಕೆಯಲ್ಲಿ ತಪ್ಪಿಲ್ಲ: ಸಿ.ಎಂ.
ರಮ್ಯಾ ಹೇಳಿಕೆಯಲ್ಲಿ ತಪ್ಪಿಲ್ಲ: ಸಿ.ಎಂ.   

ಧಾರವಾಡ: ‘ಅವರು (ಬಿ.ಕೆ.ಹರಿಪ್ರಸಾದ್‌) ನನ್ನ ಹೆಸರು ಹೇಳಿದ್ದಾರಾ? ಸಾರ್ವತ್ರಿಕ ಹೇಳಿಕೆಗಳಿಗೆಲ್ಲ (ಜನರಲ್‌ ಸ್ಟೇಟ್‌ಮೆಂಟ್‌) ನಾನು ಪ್ರತಿಕ್ರಿಯಿಸುವುದಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಿದರು.

‘ಕೈಗೆ ಹ್ಯೂಬ್ಲೋಟ್‌ ವಾಚ್‌ ಕಟ್ಟಿಕೊಂಡು, ಪಂಚೆ ಕಟ್ಟಿಕೊಂಡು ಒಳಗೆ ಖಾಕಿ ಚಡ್ಡಿ ಧರಿಸುವುದು ಸಮಾಜವಾದವಲ್ಲ’ ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಅವರು ಸಿದ್ದರಾಮಯ್ಯ ಹೆಸರು ಹೇಳದೆ ಪರೋಕ್ಷವಾಗಿ ವಾಗ್ದಾಳಿ ನಡೆಸಿರುವುದಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಸಿದ್ದರಾಮಯ್ಯ ಈ ರೀತಿ ಹೇಳಿದರು.

ಓದಿ: ಕೈಗೆ ಹ್ಯೂಬ್ಲೋಟ್ ವಾಚ್‌, ಪಂಚೆಯೊಳಗೆ ಖಾಕಿ ಚಡ್ಡಿ : ಸಿದ್ದರಾಮಯ್ಯ ವಿರುದ್ದ ಹರಿಪ್ರಸಾದ್‌ ಪರೋಕ್ಷ ವಾಗ್ದಾಳಿ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.